ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯ ಅಂಗವಾಗಿ ಗಾಂಧೀಜಿಯವರ ಸ್ವಚ್ಚ ಭಾರತದ ಕಲ್ಪನೆಯಂತೆ ತಾಲೂಕು ಕಚೇರಿ ಪರಿಸರದಲ್ಲಿ ಇಂದು ಸಂಜೆ ಸ್ವಚ್ಚತಾ ಅಭಿಯಾನ ನಡೆಯಿತು.
ಸಂಜೆ 4 ರಿಂದ 4.30 ರ ತನಕ ನಡೆದ ಸ್ವಚ್ಚತಾ ಅಭಿಯಾನದಲ್ಲಿ ಉಪತಹಶೀಲ್ದಾರ್ ರಮೇಶ್, ಹಾಗೂ ತಾಲೂಕು ಕಚೇರಿಯ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.