ಭಕ್ತಿ ,ಸಂಭ್ರಮದಿಂದ ನಡೆದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಉತ್ಸವ

0

ಶ್ರೀ ದೇವರ ದರ್ಶನ ಬಲಿ , ಬಟ್ಟಲು ಕಾಣಿಕೆ, ದೈವಗಳ ನೇಮೋತ್ಸವ

ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಉತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜ.30 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಭಕ್ತಿ,ಸಂಭ್ರಮದಿಂದ ನಡೆಯಿತು.


ಬೆಳಿಗ್ಗೆ ದೇವತಾ ಪ್ರಾರ್ಥನೆ,ಮಹಾಗಣಪತಿ ಹೋಮ ಮತ್ತು ಶುದ್ಧಿ ಕಲಶ ನಡೆಯಿತು.
ಮಧ್ಯಾಹ್ನ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು.
ಬೆಳಿಗ್ಗೆ ವಿಷ್ಣುಪ್ರಿಯ ಮಹಿಳಾ ಭಜನಾ ಮಂಡಳಿ ಬೆಳಂದೂರು ವಲಯ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.


ಸಂಜೆ ಶ್ರೀ ದೈವಗಳ ಭಂಡಾರ ತೆಗೆಯಲಾಯಿತು. ದೇವಸ್ಥಾನದಲ್ಲಿ ರಂಗಪೂಜೆ,ಮಹೋತ್ಸವ,ಶ್ರೀ ದೇವರ ದರ್ಶನ ಬಲಿ,ಬಟ್ಟಲು ಕಾಣಿಕೆ,ಮಂತ್ರಾಕ್ಷತೆ ನಡೆಯಿತು.
ನಂತರ ಗುಳಿಗ,ಪಂಜುರ್ಲಿ ,ಶಿರಾಡಿ ದೈವಗಳ ನೇಮೋತ್ಸವ ನಡೆಯಿತು.
ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ದಯಾನಂದ ಗೌಡ ಜಾಲು ಮತ್ತು ಸದಸ್ಯರು, ಆಡಳಿತ ಮೊಕ್ತೇಸರ ಎಂ.ಕೆ.ಬಾಲಚಂದ್ರ ರಾವ್, ಮೊಕ್ತೇಸರರಾದ ದಯಾಕರ ಆಳ್ವ ಬೋಳಕುಮೇರು, ಗೋಪಾಲಕೃಷ್ಣ ಭಟ್ ಕಾನಾವು, ವಸಂತ ಬೈಪಡಿತ್ತಾಯ ಮುಕ್ಕೂರು, ಅರ್ಚಕ ಸುರೇಶ ಉಪಾಧ್ಯಾಯ , ಕುಶಾಲಪ್ಪ ಗೌಡ ಪೆರುವಾಜೆ, ಶ್ರೀಮತಿ ಸುಜಾತ ವಿ.ರಾಜ್ ಕಜೆ, ಶ್ರೀಮತಿ ಪುಷ್ಪಾವತಿ ಎಂ,ಕಂಡಿಪ್ಪಾಡಿ, ಕೃಷ್ಣಪ್ಪ ನಾಯ್ಕ ದೇವಿಮೂಲೆ, ಊರಿನ ಹತ್ತು ಸಮಸ್ತರು ಹಾಗೂ ಸಾವಿರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.