ಕೆ.ವಿ.ಜಿ.ಪಾಲಿಟೆಕ್ನಿಕ್ ನಲ್ಲಿ ಹುತಾತ್ಮರ ದಿನಾಚರಣೆ

0


ಸುಳ್ಯ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಮಹಾತ್ಮಾ ಗಾಂಧಿ ಪುಣ್ಯ ತಿಥಿ ಆಚರಣೆ ಹಾಗೂ ಸ್ವಚ್ಛತೆ ಕಾರ್ಯಕ್ರಮ ಜ. 30ರಂದು ನಡೆಯಿತು. ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಜಯಪ್ರಕಾಶ ಕೆ ಹುತಾತ್ಮರ ದಿನಾಚರಣೆಯ ಮಹತ್ವ ಗಾಂಧೀಜಿಯವರು ಸ್ವಚ್ಚತೆ ಹಾಗೂ ಗ್ರಾಮಾಭಿವ್ರದ್ಧಿಯ ಬಗ್ಗೆ ಸಲ್ಲಿಸಿದ್ದ ಸೇವೆಯ ಬಗ್ಗೆ ಮಾತನಾಡಿ ನುಡಿ ನಮನ ಸಲ್ಲಿಸಿದರು.
ಕಾರ್ಯಕ್ರಮದ ನಂತರ ಸಂಸ್ಥೆಯ ಆವರಣದಲ್ಲಿ ಸ್ವಚ್ಛತೆ ಮಾಡಲಾಯಿತು.