ಇಂದಿನಿಂದ ಸುಳ್ಯ ಕಾಯರ್ತೋಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಆರಂಭ

0

ಮೆರವಣಿಗೆಯೊಂದಿಗೆ ದೇವಳಕ್ಕೆ ಹಸಿರುವಾಣಿ ಸಮರ್ಪಣೆ

ಸುಳ್ಯ ಕಾಯರ್ತೋಡಿ ಶ್ರೀ ‌ಮಹಾವಿಷ್ಣು ದೇವಸ್ಥಾನದಲ್ಲಿ ಇಂದಿನಿಂದ ಬ್ರಹ್ಮಕಲಶೋತ್ಸವ ಸಂಭ್ರಮ.
ಪ್ರಯುಕ್ತ ಇಂದು ಬೆಳಗ್ಗೆ ಸುಳ್ಯದ ಶ್ರೀ ರಾಮ ಭಜನಾ ಮಂದಿರದ ಮುಂಭಾಗದಿಂದ ಹಸಿರುವಾಣಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.


ನಾಸಿಕ್ ಬ್ಯಾಂಡ್, ವೀರಗಾಸೆ ಕುಣಿತ, ಡೊಳ್ಳು ಕುಣಿತ ಮೆರವಣಿಗೆ ಆಕರ್ಷಣೆಯಾಗಿತ್ತು.

ದೇವಸ್ಥಾನ ಸಮಿತಿಯವರು, ಬ್ರಹ್ಮಕಲಶೋತ್ಸವ ಸಮಿತಿಯವರು ಹಾಗೂ ಉಪ ಸಮಿತಿಗಳ ಪದಾಧಿಕಾರಿಗಳು, ಹಾಗೂ ನೂರಾರು ಸಂಖ್ಯೆಯಲ್ಲಿ ಭಕ್ತರು ಹಸಿರುವಾಣಿ ಮೆರವಣಿಗೆಯಲ್ಲಿ ಭಾಗವಹಿಸಿದರು.

ದೇವಸ್ಥಾನದಲ್ಲಿ ಇಂದಿನಿಂದ ಬ್ರಹ್ಮಕಲಶೋತ್ಸವ ಆರಂಭಗೊಂಡು ಮುಂದಿನ 10 ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುವುದು.

ಇಂದು ಸಂಜೆ ದೇವಸ್ಥಾನಕ್ಕೆ ತಂತ್ರಿಗಳ ಆಗಮನವಾಗುವುದು. ತಂತ್ರಿಯವರನ್ನು ಪೂರ್ಣಕುಂಭ ಸ್ವಾಗತದ ಮೂಲಕ ಬರಮಾಡಿಕೊಳ್ಳಲಾಗುವುದು. ಸಂಜೆ ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಸಂಭ್ರಮ ನಡೆಯುವುದು.

ಪ್ರತೀದಿನ ಅನ್ನದಾನ ನಡೆಯುವುದು.