ಅಖಿಲ ಭಾರತೀಯ ಅಧಿವಕ್ತಾ ಪರಿಷತ್ : ರಾಷ್ಟ್ರೀಯ ಯುವ ದಿನಾಚರಣೆ

0

ಅಖಿಲ ಭಾರತೀಯ ಅಧಿವಕ್ತಾ ಪರಿಷತ್ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಶಾಲಾಭಿವೃದ್ಧಿ ಸಮಿತಿ ಉಬರಡ್ಕ ಮಿತ್ತೂರು ಸಹಯೋಗದೊಂದಿಗೆ ಜ 31 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಬರಡ್ಕ ಮಿತ್ತೂರು ಇಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ನಡೆಯಿತು.


ಶಿಕ್ಷಕ ರಕ್ಷಕರ ಸಂಘದ ಅಧ್ಯಕ್ಷರಾದ ಶ್ರೀ ಪುರುಷೋತ್ತಮ ಪಾಪುನಡ್ಕರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ರತ್ನಾಕರ ಗೌಡ ಬಳ್ಳಡ್ಕ ಆಡಳಿತ ಮೊಕ್ತೇಸರರು ಶ್ರೀ ನರಸಿಂಹ ದೇವಸ್ಥಾನ ಉಬರಡ್ಕ ಮಿತ್ತೂರು ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು,ನಗರ ಪಂಚಾಯತ್ ಅಧ್ಯಕ್ಷರಾದ ವಿನಯ ಕುಮಾರ್ ಕಂದಡ್ಕ ರಾಷ್ಟ್ರೀಯ ಯುವ ದಿನದ ಕುರಿತು ದಿಕ್ಸೂಚಿ ಭಾಷಣ ಮಾಡಿದರು.

ಅಧಿವಕ್ತಾ ಪರಿಷತ್ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲೆಯ ಉಪಾಧ್ಯಕ್ಷರು ಹಾಗೂ ಸುಳ್ಯ ವಕೀಲರ ಸಂಘದ ಕೋಶಾಧಿಕಾರಿ ಜಗದೀಶ್ ಡಿ ಪಿ ಪ್ರಾಸ್ತಾವಿಕವಾಗಿ ಮಾತನಾಡಿದರು,ಅಧಿವಕ್ತಾ ಪರಿಷತ್ತಿನ ಸುಳ್ಯ ಘಟಕದ ಅಧ್ಯಕ್ಷ ರಾದ ನ್ಯಾಯವಾದಿ ಹರೀಶ್ ಬೂಡುಪನ್ನೆ. ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಮೀನಾಕ್ಷಿ, ನ್ಯಾಯವಾದಿ ಸಂದೀಪ್ ಮದುವೆಗದ್ದೆ , ಅತಿಥಿಯಾಗಿ ಭಾಗವಹಿಸಿ ದ್ದರು . ನ್ಯಾಯವಾದಿ ಸಂದೀಪ್ ವಳಲಂಬೆ ವಂದನಾರ್ಪಣೆ ಸಲ್ಲಿಸಿದರು. ಸಂದೀಪ್ ಮದುವೆಗದ್ದೆ ಕಾರ್ಯಕ್ರಮ ನಿರೂಪಿಸಿದರು.