ಬೆಳ್ಳಾರೆ: ಕುಣಿತ ಭಜನಾ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಶಂಷಾ ಪತ್ರ ವಿತರಣೆ ಮತ್ತು ಕೃತಜ್ಞತಾ ಕಾರ್ಯಕ್ರಮ

0

ಬೆಳ್ಳಾರೆ ಸ್ನೇಹಿತರ ಕಲಾ ಸಂಘದ ಆಶ್ರಯದಲ್ಲಿ ಕುಣಿತ ಭಜನಾ‌ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಶಂಸನಾ ಪತ್ರ ವಿತರಣೆ ಮತ್ತು ಕೃತಜ್ಞತಾ ಸಭೆ ಜ. 28ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಉಪ ಪ್ರಾಂಶುಪಾಲರಾದ ಉಮಾಕುಮಾರಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು, ಅಜಿಪಿಲ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ಶ್ರೀಮತಿ ಸುಹಾನ, ಅಜಿಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರಾದ ಸುರೇಶ್ ಕುಮಾರ್ ಶೆಟ್ಟಿ ಪನ್ನೆ ಗುತ್ತು, ಬೆಳ್ಳಾರೆ ಗ್ರಾ. ಪಂ. ಅಧ್ಯಕ್ಷರಾದ ಚಂದ್ರಶೇಖರ ಪನ್ನೆ, ಅಜಿಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುನಿಲ್ ರೈ ಪುಡ್ಕಜೆ, ಉಪಸ್ಥಿತರಿದ್ದರು, ಪನ್ನೆ ಪ್ರದೀಪ್ ಕುಮಾರ್ ರೈ ಕೃತಜ್ಞಾತಾ ಮಾತುಗಳನ್ನಾಡಿದರು.

ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ವಸಂತ್ ಉಲ್ಲಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸ್ನೇಹಾಂಜಲಿ ಕುಣಿತ ಭಜನಾ ತಂಡದ ಪೋಷಕರು ಭಜನಾ ಶಿಕ್ಷಕರಾದ ಸದಾನಂದ ಕಾಣಿಯೂರುರವರನ್ನು ಸನ್ಮಾನಿಸಿದರು. ಕಾರ್ಯದರ್ಶಿ ಆನಂದ ಮಣಯಾಣಿ ಸ್ವಾಗತಿಸಿ, ಶ್ರೀನಿವಾಸ್ ನಾಯ್ಕ ಕುರುಂಬುಡೇಲು ವಂದಿಸಿದರು. ಸಂಘದ ಪೂರ್ವಾಧ್ಯಕ್ಷ ಸಂಜಯ್ ನೆಟ್ಟಾರು ಕಾರ್ಯಕ್ರಮ ನಿರೂಪಿಸಿದರು.