ಶ್ರೀ ಹರಿಹರೇಶ್ವರ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಲ್ಲತ್ತಡ್ಕ ಇದರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು.

ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು, ಸಮಿತಿಯ ಸದಸ್ಯರುಗಳಾದ ಚಂದ್ರಹಾಸ ಶಿವಾಲ, ಶರತ್ ಡಿ.ಎಸ್, ಭವಾನಿಶಂಕರ ಪೈಲಾಜೆ, ಆನಂದ ಕೆರೆಕೋಡಿ, ಚಂದ್ರಶೇಖರ ಕಿರಿಭಾಗ, ರೇಷ್ಮಾ ಕಟ್ಟೆಮನೆ, ಜ್ಯೋತಿ ಕಳಿಗೆ, ದೇವಳದ ಪ್ರದಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶೇಷಪ್ಪ ಗೌಡ ಕಿರಿಬಾಗ, ಆರ್ಥಿಕ ಸಮಿತಿಯ ಅಧ್ಯಕ್ಷರಾದ ಪ್ರಭಾಕರ ಕಿರಿಭಾಗ, ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ಜನಾರ್ದನ ಗುಂಡಿಹಿತ್ಲು ಹಾಗು ಸದಸ್ಯರು ಹಾಗೂ ಎಲ್ಲಾಉಪ ಸಮಿತಿಯ ಅಧ್ಯಕ್ಷರುಗಳು, ಸದಸ್ಯರುಗಳು ಹಾಜರಿದ್ದರು.

ವರದಿ: ಕುಶಾಲಪ್ಪ ಕಾಂತುಕುಮೇರಿ