ಸುಬ್ರಹ್ಮಣ್ಯ: ಕೊಳೆತ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆ

0


ಸುಬ್ರಹ್ಮಣ್ಯದ ಕುಮಾರಧಾರ ಬಳಿಯ ಕಾಡಿನೊಳಗೆ ಕೊಳೆತ ಸ್ಥಿತಿಯಲ್ಲಿ ಗಂಡಸಿನ ಶವ ಇಂದು ಪತ್ತೆಯಾಗಿದೆ.
ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ರವೀಂದ್ರ ಸಿ. ಎಂ, ಸುಬ್ರಮಣ್ಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಮೃತ ವ್ಯಕ್ತಿ ಯಾರು ಎಂಬುದು ಇನ್ನಷ್ಟೇ ತನಿಖೆಯಿಂದ ತಿಳಿಯಬೇಕಿದೆ.