ಕುಕ್ಕುಜಡ್ಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

0

ಕುಕ್ಕುಜಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ, ಬಹುಮಾನ ವಿತರಣೆ ಜ.೨೮ರಂದು ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಪದ್ಮಪ್ರಿಯ ದೀಪ ಬೆಳಗಿಸಿ ಉದ್ಘಾಟಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷೆ ಮೋಹಿನಿ.ಎಚ್ ಸಭಾಧ್ಯಕ್ಷೆಯನ್ನು ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಆಹಾರ ಸರಬರಾಜು ಜಿಲ್ಲಾಜನಜಾಗೃತಿ ಸಮಿತಿಯ ಸದಸ್ಯ ರಾಧಾಕೃಷ್ಣ ಬೊಳ್ಳೂರು, ಗ್ರಾಮ ಪಂಚಾಯತ್ ಸದಸ್ಯರುಗಳಾದ ಕೃಷ್ಣಪ್ರಸಾದ ಮಾಡಬಾಗಿಲು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪದ್ಮನಾಭ ಬೊಳ್ಳೂರು, ದಿವ್ಯಾ ಮಡಪ್ಪಾಡಿ, ಜನಾರ್ಧನ.ಪಿ, ತೇಜಾವತಿ, ಇನ್ನರ್‌ವೀಲ್ಹ್ ಕ್ಲಬ್‌ನ ಅಧ್ಯಕ್ಷೆ ಸರೋಜ ಮಾಯಿಲಪ್ಪ, ವಿದ್ಯಾರ್ಥಿ ನಾಯಕ ಅಕ್ಷಯ್ ಕುಮಾರ್. ಶಾಲಾ ಮುಖ್ಯಗುರುಗಳು ಹೇಮಲತಾ.ಎಸ್ ಉಪಸ್ಥಿತರಿದ್ದರು.


ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೇಯಾ.ಕೆ.ಎನ್ ವರನ್ನು ಪುರಸ್ಕರಿಸಿ ಸನ್ಮಾನಿಸಲಾಯಿತು. ಅಂತರಾಷ್ಟ್ರೀಯ ಜಾಂಬೂರಿಯಲ್ಲಿ ಪಾಲ್ಗೊಂಡ ಸ್ಕೌಟ್ ಗೈಡ್ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು. ಶಿಕ್ಷಕಿ ರತ್ನಾವತಿ.ಕೆ, ಯೋಗಿನಿ.ಯು ನಿರೂಪಿಸಿದರು. ಮುಖ್ಯಶಿಕ್ಷಕಿ ಹೇಮಲತಾ.ಎಸ್ ಪ್ರಸ್ತಾವಿಕ ಮಾತನಾಡಿ ಸ್ವಾಗತಿಸಿ ವರದಿ ವಾಚಿಸಿದರು. ಶಿಕ್ಷಕಿ ಸವಿತಾ.ಕೆ.ಕೆ ರವರು ಬಹುಮಾನದ ವಿಜೇತರ ಪಟ್ಟಿ, ದತ್ತಿನಿಧಿ ವಿತರಣೆಯನ್ನು ಚಾಚಿಸಿದರು. ಶಿಕ್ಷಕಿ ಸುಲೋಚನ.ಪಿ ವಂದಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.