ನಿಂತಿಕಲ್ಲು : ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಸಪ್ರಶ್ನೆ ಕಾರ್ಯಕ್ರಮ

0

ದ. ಕ. ಜಿಲ್ಲಾ ಪಂಚಾಯತ್, ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಸುಳ್ಯ ಇದರ ವತಿಯಿಂದ 2022-23 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ತಾಂತ್ರಿಕ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಕಾರ್ಯಕ್ರಮ ನಿಂತಿಕಲ್ಲು ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ನಡೆಯಿತು.


ಈ ಸಂದರ್ಭದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸುಧೀರ್ ಎಂ. ವಿ. ಹಾಗೂ ಎನ್ಎಸ್ಎಸ್ ಅಧಿಕಾರಿಗಳು, ಪ್ಲೇಸ್ಮೆಂಟ್ ಆಫೀಸರ್, ಕಾಲೇಜಿನ ಪ್ರೋಗ್ರಾಮ್ ಆಫೀಸರ್ ಹಾಗೂ ಅಧ್ಯಾಪಕ ವೃಂದದವರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಇಲಾಖಾ ವತಿಯಿಂದ ಆಶಾ ಕಾರ್ಯಕರ್ತೆಯರು, ಆರೋಗ್ಯ ಅಧಿಕಾರಿಗಳು, ಶುಶ್ರುಕಿಯರು ಕಾರ್ಯಕ್ರಮ ನಡೆಸಿಕೊಟ್ಟರು.