ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಶ್ರೀರಾಮ ಪಾಟಾಜೆ

0

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಶ್ರೀರಾಮ ಪಾಟಾಜೆ ಆಯ್ಕೆಯಾದರು.
ಫೆ.4 ರಂದು ಸಹಕಾರಿ ಸಂಘದ ಸಭಾಂಗಣದಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು.
ಸಹಕಾರಿ ಸಂಘದ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯರವರು ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.


ನಾಮಪತ್ರಕ್ಕೆ ಉಪಾಧ್ಯಕ್ಷ ಅಬ್ದುಲ್ ರಹಮಾನ್ ಸೂಚಕರಾಗಿ, ಅನಿಲ್ ರೈ ಅನುಮೋದಿಸಿದರು.
ಅಧ್ಯಕ್ಷರಾಗಿದ್ದ ಅನಿಲ್ ರೈ ಚಾವಡಿಬಾಗಿಲುರವರು ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಮಾಡಿಕೊಂಡ ಒಪ್ಪಂದದಂತೆ ಎರಡೂವರೆ ವರ್ಷ ಅಧ್ಯಕ್ಷರಾಗಿ ಬಳಿಕ ಅಧ್ಯಕ್ಷತೆಗೆ ರಾಜೀನಾಮೆ ನೀಡಿದ್ದರು.
ಅಧ್ಯಕ್ಷತೆ ವಹಿಸಿಕೊಂಡ ಶ್ರೀರಾಮಪಾಟಾಜೆಯವರು ಮಾತನಾಡಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ನಿರ್ದೇಶಕರಾದ ವಿಠಲದಾಸ್ ಎನ್.ಎಸ್.ಡಿ.,ಅನಿಲ್ ರೈ, ಕರುಣಾಕರ ಆಳ್ವ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮೇಲ್ವಿಚಾರಕ ಬಾಲಕೃಷ್ಣ ಪುತ್ಯರವರು ನೂತನ ಅಧ್ಯಕ್ಷರಿಗೆ ಶುಭಹಾರೈಸಿ ಮಾತನಾಡಿದರು.


ಈ ಸಂದರ್ಭದಲ್ಲಿ ನಿರ್ದೇಶಕರಾದ ರಮೇಶ್ ಮಾರ್ಲ, ಶ್ರೀಮತಿ ಸಾವಿತ್ರಿ, ಶ್ರೀಮತಿ ನಿರ್ಮಲ ರೈ ಕೆಡೆಂಜಿಮೊಗ್ರು, ಶ್ರೀಮತಿ ಶಾರದಾ, ಹರೀಶ ಬಿ, ಸುಂದರ ಕೆ.ಜೆ ಉಪಸ್ಥಿತರಿದ್ದರು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯ ರೈ ವಂದಿಸಿದರು.