ಇಂದು ತಂಟೆಪ್ಪಾಡಿ ನಿನಾದದಲ್ಲಿ ನಾಟಕ ಮಾಧವಿ, ಪ್ರತಿಭಾನ್ವಿತರಿಗೆ ಗೌರವಾರ್ಪಣೆ

0

ವಸಂತ ಶೆಟ್ಟಿ ಬೆಳ್ಳಾರೆಯವರ ಮುಂದಾಳತ್ವ ಕಳಂಜ ಗ್ರಾಮದ ತಂಟೆಪ್ಪಾಡಿಯಲ್ಲಿರುವ ನಿನಾದ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ ನಾಟಕ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಫೆ. 5ರಂದು ಸಂಜೆ 3.30ರಿಂದ ನಡೆಯಲಿದೆ.
ದ.ಕ. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ. ಮುರಳಿಮೋಹನ್ ಚೂಂತಾರು ಮತ್ತು ಅನರ್ಘ್ಯ ಐಏಎಸ್ ಅಕಾಡೆಮಿ ನವದೆಹಲಿ ಮತ್ತು ಬೆಂಗಳೂರು ಇದರ ಸಂಸ್ಥಾಪಕರಾದ ಮನೋಜ್ ಮಡ್ತಿಲರಿಗೆ ಗೌರವಾರ್ಪಣೆ ನಡೆಯಲಿದೆ. ಕೈವಲ್ಯ ಕಲಾಕೇಂದ್ರ ಬೆಂಗಳೂರು ಅಭಿನಯಿಸುವ ನಾಟಕ ಮಾಧವಿ ಮತ್ತು ನಿನಾದ ಸಾಂಸ್ಕೃತಿಕ ಕಲಾಕೇಂದ್ರದ ಕಲಾವಿದರಿಂದ ಹಾಡು ಮತ್ತು ನೃತ್ಯಗಳ ವೈವಿದ್ಯಮಯ ಕಾರ್ಯಕ್ರಮ ನಡೆಯಲಿದೆ. ಎಲ್ಲಾ ಕಾರ್ಯಕ್ರಮಗಳಿಗೆ ಕಲಾಭಿಮಾನಿಗಳು ಆಗಮಿಸುವಂತೆ ನಿನಾದ ಸಾಂಸ್ಕೃತಿಕ ಕಲಾಕೇಂದ್ರದ ಕಾರ್ಯದರ್ಶಿ ವಸಂತ ಶೆಟ್ಟಿ ಬೆಳ್ಳಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.