ಅಡ್ಕಾರ್ ಇಲೆಕ್ಟ್ರಾನಿಕ್ಸ್ ವತಿಯಿಂದ ಕಾಯರ್ತೋಡಿ ದೇವಸ್ಥಾನಕ್ಕೆ ಸ್ಟೀಲ್ ಪಾತ್ರೆ ಕೊಡುಗೆ

0


ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಸುಳ್ಯದ ಅಡ್ಕಾರ್ ಎಲೆಕ್ಟ್ರಾನಿಕ್ ವತಿಯಿಂದ ಸುಮಾರು 30 ಸಾವಿರ ಮೌಲ್ಯದ ಸ್ಟೀಲ್ ಪಾತ್ರೆಯನ್ನು ಕೊಡುಗೆಯಾಗಿ ನೀಡಿದರು.


ಇಂದು ದೇವಳದಲ್ಲಿ ಅಡ್ಕಾರ್ ಇಲೆಕ್ಟ್ರಾನಿಕ್ಸ್ ನ ಮಾಲಕರಾದ ದಿನೇಶ್ ಅಡ್ಕಾರ್ ಮತ್ತು ಶ್ರೀಮತಿ ಚೈತ್ರ ದಿನೇಶ್ ಹಾಗೂ ಮಕ್ಕಳು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಕೆ.ಕೃಷ್ಣ ಕಾಮತ್ ಹಾಗೂ ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪಿ‌.ಕೆ .ಉಮೇಶ ರವರಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಎ.ಟಿ.ಕುಸುಮಾಧರ, ಆರ್ಥಿಕ ಸಮಿತಿ ಸಂಚಾಲಕ ನಾರಾಯಣ ಕೇಕಡ್ಕ,ವ್ಯವಸ್ಥಾಪನಾ ಸಮಿತಿ ಸದಸ್ಯರು,ಅರ್ಚಕರು,ವಿವಿಧ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.