ವಾರದ ಹಿಂದೆ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಇಂದು ಮೃತಪಟ್ಟಿದ್ದಾರೆ.
ಸುಳ್ಯ ಜಯನಗರದ ಶ್ರೀಮತಿ ಕುಸುಮಾರವರ ಪುತ್ರ ಸಂದೀಪ್ (21 ವರ್ಷ) ಒಂದು ವಾರದ ಹಿಂದೆ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿ ಅವರು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಂದೀಪ್ರವರು ಇಂದು ಬೆಳಿಗ್ಗೆ ಅಸುನೀಗಿದ್ದಾರೆ.