ಸಾಂದೀಪ್ ಶಾಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

0

ಸಾಂದೀಪ್ ವಿಶೇಷ ಮಕ್ಕಳ ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಒಂಭತ್ತು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಲಭಿಸಿದೆ.
ಪ್ರಶಸ್ತಿ ಲಭಿಸಿದ ವಿದ್ಯಾರ್ಥಿಗಳಿಗೆ ಸಜ್ಜನ ಪ್ರತಿಷ್ಠಾನ ವತಿಯಿಂದ ಬಹುಮಾನ ವಿತರಿಸಿ ಗೌರವಿಸಲಾಯಿತು.

ಉಳಿದ ವಿದ್ಯಾರ್ಥಿಗಳಿಗೂ ಪುಸ್ತಕ ವಿತರಿಸಲಾಯಿತು. ಕಾರ್ಯಕ್ರಮವನ್ನು ನಿವೃತ್ತ ಕೃಷಿ ಅಧಿಕಾರಿ ಗಣದತ್ತ್ ಕೋಟಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಎಂ ಬಿ ಫೌಂಡೇಷನ್ ಅಧ್ಯಕ್ಷ ಎಂ ಬಿ ಸದಾಶಿವ, ಸಾಂದೀಪ್ ವಿಶೇಷ ಮಕ್ಕಳ ಶಾಲೆ ಸಂಚಾಲಕಿ ಹರಿಣಿ ಸದಾಶಿವ, ಫೌಂಡೇಶನ್ ಕೋಶಾಧಿಕಾರಿ ಪುಷ್ಪರಾಧಕೃಷ್ಣ ಮಾಣಿಬೆಟ್ಟು,ರಾಧಾಕೃಷ್ಣ ಮಾಣಿಬೆಟ್ಟು ಟ್ರಸ್ಟಿಗಳಾದ ಶರೀಫ್ ಜಟ್ಟಿಪಳ್ಳ ,ಶ್ರಿಮತಿ ಸುಷ್ಮಾ ಗಣದತ್ತ್ ಕೋಟಿ, ಎಂ ಬಿ ಫೌಂಡೇಶನ್ ಸಲಹಾ ಸಮಿತಿ ಸದಸ್ಯರಾದ ಮಧುಕುಮಾರ್,ದೊಡ್ಡಯ್ಯ ಗೌಡ ಕುಂಚಡ್ಕ,ಉದ್ಯಮಿ ಶ್ರವಣ್ ಕುಮಾರ್, ಕೆ ಸಿ ರಘ ಮೊದಲಾದವರು ಉಪಸ್ಥಿತರಿದ್ದರು.