ಆಲೆಟ್ಟಿ ಶ್ರೀ ಸದಾಶಿವ ದೇವರ ಜಾತ್ರೋತ್ಸವದ ನಾಲ್ಕನೇ ದಿನವಾದ ಇಂದು ಬೆಳಗ್ಗೆ ಶ್ರೀ ದೆವರಿಗೆ ಪೂಜೆಯಾಗಿ ಶ್ರೀ ದೇವರ ದೊಡ್ಡ ದರ್ಶನ ಬಲಿ ಉತ್ಸವ ನಡೆದು ಬಟ್ಟಲು ಕಾಣಿಕೆಯಾಗಿ ರಾಜಾಂಗಣ ಪ್ರಸಾದ ವಿತರಣೆಯಾಯಿತು.ಈ ಸಂದರ್ಭದಲ್ಲಿ ಊರ ಹಾಗೂ ಪರ ಊರಿನ ಭಕ್ತಾದಿಗಳು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದರು.
ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆಯಾಯಿತು. ಬಳಿಕ ಆಗಮಿಸಿದ ಸರ್ವರಿಗೂ ಸಾರ್ವಜನಿಕ ಅನ್ನ ಸಂತರ್ಪಣೆಯಾಯಿತು.