ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಸಂಪನ್ನ

0

ಇಂದು ರಾತ್ರಿ ಅಗ್ನಿಗುಳಿಗ ದೈವದ ಭೂತಕೋಲ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.13 ರಂದು ಪ್ರಾರಂಭಗೊಂಡಿದ್ದು ಫೆ 17ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು.
ಫೆ.17 ರಂದು ಬೆಳಿಗ್ಗೆ ಗಂಟೆ 7.00 ಕ್ಕೆ ಕವಾಟೋದ್ಘಾಟನೆ, ತೈಲಾಭ್ಯಂಜನ,ಉಷಾಃಪೂಜೆ,ಆರಾಟುಬಲಿ,ನಂತರ ಅವಭೃತ ಸ್ನಾನ ನಡೆಯಿತು.
ಬಳಿಕ ದರ್ಶನ ಬಲಿ ನಡೆಯಿತು.


ಮಧ್ಯಾಹ್ನ ರಾಜಾಂಗಣ ಪ್ರಸಾದ,ಬಟ್ಟಲುಕಾಣಿಕೆ,ಧ್ವಜ ಅವರೋಹಣ ,ಸಂಪ್ರೋಕ್ಷಣೆ,ಮಹಾಪೂಜೆ,ಮಂತ್ರಾಕ್ಷತೆ,ಅನ್ನಪ್ರಸಾದ ನಡೆಯಿತು.ಸಾವಿರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿ,ಅನ್ನಪ್ರಸಾದ ಸ್ವೀಕರಿಸಿದರು.
ಇಂದು ರಾತ್ರಿ 7.30 ಕ್ಕೆ ಅಗ್ನಿಗುಳಿಗ ದೈವಸ್ಥಾನದ ಭಂಡಾರ ತೆಗೆಯುವುದು,ಭೂತಕೋಲ,ಬಟ್ಟಲು ಕಾಣಿಕೆ ನಡೆಯಲಿದೆ.