ತೊಡಿಕಾನದಲ್ಲಿ ಗ್ರಾಮವಾಸ್ತವ್ಯ

0


ತೊಡಿಕಾನ ದೇವಸ್ಥಾನದ ಅಕ್ಷಯ ಸಭಾಭವನದಲ್ಲಿ ಅಧಿಕಾರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮ ಇಂದು ನಡೆಯಿತು. ಸುಳ್ಯ ತಹಶೀಲ್ದಾರ್ ಮಂಜುನಾಥ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ಜನರ ಕುಂದು ಕೊರತೆಗಳ ಬಗ್ಗೆ, ಅರಣ್ಯ ಇಲಾಖೆ, ಸರ್ವೆ ಇಲಾಖೆ ಬಗ್ಗೆ ಸಮಸ್ಯೆಗಳಿದ್ದರೆ ಇತ್ಯರ್ಥಪಡಿಸುವಂತೆ ತಿಳಿಸಿದರು. ಸುಮಾರು 12 ಮಂದಿ ಫಲಾನುಭವಿಗಳಿಗೆ ಇಒ ಭವಾನಿಶಂಕರ್‌ರವರು ಹಕ್ಕುಪತ್ರ ವಿತರಿಸಿದರು. ಎಲ್ಲಾ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಮಾಹಿತಿಗಳನ್ನು ಸಭೆಗೆ ತಿಳಿಸಿದರು.


ವೇದಿಕೆಯಲ್ಲಿ ಇಒ ಭವಾನಿಶಂಕರ, ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಹರಿಣಿ ದೇರಾಜೆ, ಉಪಾಧ್ಯಕ್ಷೆ ಶ್ವೇತಾ, ತೊಡಿಕಾನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಉಳುವಾರು, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಎಂ.ಟಿ. ವೀಣಾ, ಸಿಡಿಪಿಒ ಶ್ರೀಮತಿ ರಶ್ಮಿ, ಡಾ. ನಂದಕುಮಾರ್, ಗ್ರಾ.ಪಂ. ಸದಸ್ಯರು ಇದ್ದರು.
ಅರಂತೋಡು ಗ್ರಾ.ಪಂ. ಪಿಡಿಒ ಜಯಪ್ರಕಾಶ್ ಸ್ವಾಗತಿಸಿ, ಸುಳ್ಯ ಗ್ರಾಮ ಲೆಕ್ಕಾಧಿಕಾರಿ ತಿಪ್ಪೇಶಪ್ಪ ಕಾರ್ಯಕ್ರಮ ನಿರೂಪಿಸಿದರು.