ಕೂಜುಗೋಡು ಕಟ್ಟೆಮನೆ ತರವಾಡು ಮನೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಧರ್ಮನಡಾವಳಿ ಮುಂದೂಡಿಕೆ

0


ಮಾರ್ಚ್ 3ರಿಂದ 9ರವರೆಗೆ ನಡೆಯಬೇಕಾಗಿದ್ದ ಕೂಜುಗೋಡು ಕಟ್ಟೆಮನೆ ಕುಟುಂಬದ ಕೆಂಚಾಂಬದೇವಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಸಹಪರಿವಾರ ದೈವಗಳ ಪ್ರತಿಷ್ಠೆ ಹಾಗೂ ಧರ್ಮನಡಾವಳಿ ಮತ್ತು ಶೃಂಗೇರಿ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಗುರುವಂದನೆ ಮತ್ತು ಪಾದಪೂಜೆ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ನಿಗದಿಪಡಿಸಿ ತಿಳಿಸಲಾಗುವುದು ಎಂದು ಕುಟುಂಬದ ಮುಖ್ಯಸ್ಥರು ತಿಳಿಸಿದ್ದಾರೆ.