ಎಣ್ಮೂರು ಗ್ರಾಮದ ಉಳೆಲಾಡಿ, ಸರ್ವೆ ಇಲಾಖೆಯ ನಿವೃತ್ತ ಸಿಬ್ಬಂದಿ ಬಾಲಕೃಷ್ಣ ಗೌಡರು ಹೃದಯಾಘಾತದಿಂದ ಫೆ. 22ರಂದು ನಿಧನರಾದರು.
ಅವರಿಗೆ 70 ವರ್ಷ ವಯಸ್ಸಾಗಿತ್ತು. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.
ಮೃತರು ಪತ್ನಿ, ಮೂವರು ಪುತ್ರರು, ಕುಟುಂಬಸ್ಥರನ್ನು, ಬಂಧುಗಳನ್ನು ಅಗಲಿದ್ದಾರೆ.