ಗಡಿನಾಡ ಧ್ವನಿ ಗಡಿನಾಡ ಶ್ರೆಯೋಭಿವೃದ್ದಿ ಟ್ರಸ್ಟ್ ವತಿಯಿಂದ ನೀಡುವ ಗಡಿನಾಡ ಧ್ವನಿ ಜ್ಞಾನ ಭೂಷಣ ರಾಷ್ಟ್ರೀಯ ಪ್ರಶಸ್ತಿ ಸಮಾಜ ಸೇವಕ,ಶಿಕ್ಷಣ ಸಹಕಾರಿ, ಸಂಘಟಕ ಡಾ.ಉಮ್ಮರ್ ಬೀಜದಕಟ್ಟೆ ಆಯ್ಕೆಯಾಗಿರುತ್ತಾರೆ.
ಸಜ್ಜನ ಪ್ರತಿಷ್ಠಾನ ಅಧ್ಯಕ್ಷರಾಗಿ, ಪಾರ್ಮಡ್ ಕಂಪನಿಯು ಮಾನವ ಸಂಪನ್ಮೂಲ ವಿಭಾಗದ ಹಿರಿಯ ಉಪಾಧ್ಯಕ್ಷರಾಗಿ,ಬುಡೋಳಿ ವಿಸ್ಡಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ, ಯೆನಪೋಯ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಸ್ಟಡೀಸ್ ಸದಸ್ಯರಾಗಿ,ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.
26 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಬಹಳ ಯಶಸ್ವಿ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ಸಂಘಟಿಸಿರುತ್ತಾರೆ.
ಇವರಿಗೆ ದ.ಕ ಜಿಲ್ಲಾಡಳಿತ 2019 ರಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.