ಪೈಚಾರು : ಶಾಂತಿನಗರ ತಿರುವು ಬಳಿ ಗುಡ್ಡೆಗೆ ಆಕಸ್ಮಿಕ ಬೆಂಕಿ

0

ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿಯವರಿಂದ ನಂದಿಸುವ ಪ್ರಯತ್ನ

ಸುಳ್ಯ ಪೈಚಾರಿನಿಂದ ಶಾಂತಿನಗರ ತಿರುವು ಬಳಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಗುಡ್ಡೆಗೆ ಬೆಂಕಿ ವ್ಯಾಪಿಸಿದ್ದು, ಸ್ಥಳೀಯ ಯುವಕರು ಮತ್ತು ಅಗ್ನಿಶಾಮಕ ಸಿಬ್ಬಂದಿಯವರು ನಂದಿಸುವ ಪ್ರಯತ್ನದಲ್ಲಿದ್ದಾರೆ.

ಅಗ್ನಿ ಅವಘಡ ಆದ ಜಾಗದಲ್ಲಿ ವಿದ್ಯುತ್ ಟ್ರಾನ್ಸ್ ಫಾರಂ ಇದ್ದು ಇದರಿಂದ ಶಾರ್ಟ್ ಸರ್ಕ್ಯೂಟ್ ಆಗಿ ಸ್ಥಳದಲ್ಲಿದ್ದ ಕುರುಚಲು ಗಿಡಗಳಿಗೆ ಬೆಂಕಿಹಿಡಿದು ಈ ಘಟನೆ ಸಂಭವಿಸಿದೆ.

ಎಲಿಮಲೆಯಲ್ಲಿ ಇದೇ ರೀತಿಯ ಘಟನೆ ಸಂಭವಿಸಿದ್ದು ಸುಳ್ಯ ಅಗ್ನಿಶಾಮಕ ದಳದ ವಾಹನವು ಅಲ್ಲಿಗೆ ತೆರಳಿರುವ ಕಾರಣ ಪುತ್ತೂರು ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ವಾಹನವನ್ನು ತರಿಸುವ ಕಾರ್ಯ ನಡೆಯುತ್ತಿದೆ.

ಇಲ್ಲಿ ಆಗಾಗ್ಗೆ ಈ ರೀತಿಯ ಘಟನೆ ನಡೆಯುತ್ತಿದ್ದು ಸಂಬಂಧಪಟ್ಟ ಇಲಾಖೆಯವರು ಇತ್ತ ಗಮನ ಹರಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.