ಸೌಮ್ಯ ಪೆರ್ನಾಜೆಗೆ ಗಡಿನಾಡ ದ್ವನಿ ” ಮಧು ಭೂಷಣ” ರಾಜ್ಯ ಪ್ರಶಸ್ತಿ ಪ್ರದಾನ

0


ಗಡಿನಾಡ ಧ್ವನಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ (ರಿ) ಇದರ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನದಲ್ಲಿ ಸೌಮ್ಯ ಪೆರ್ನಾಜೆ ಅವರಿಗೆ ಮಧುಭೂಷಣ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪ್ರಶಸ್ತಿ ಪ್ರದಾನ ಮಹಾ ಸಮ್ಮೇಳನವು ಗಡಿನಾಡ ಪ್ರದೇಶವಾದ ಒಡ್ಯ ಸಹಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಫೆ.೨೫ ರಂದು ನಡೆಯಿತು.
ಮಿತ್ರಂಪಾಡಿ ಜಯರಾಮ್ ರೈ ಅಬುದಾಬಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ದ.ಕ.ಜಿ ಸಾಹಿತ್ಯ ಪರಿಷತ್‌ನ ಸಮ್ಮೇಳನಾಧ್ಯಕ್ಷ ಮಲಾರ್ ಜಯರಾಮ್ ರೈ, ಅಧ್ಯಕ್ಷ ಉಮೇಶ್ ನಾಯಕ್ , ಗಡಿನಾಡ ದ್ವನಿ ಅಧ್ಯಕ್ಷ ಡಾ. ಹಾಜಿಎಸ್ ಅಬ್ಬುಬಕರ್ ಅರ್ಲಪದವು, ಪ್ರ.ಕಾರ್ಯದರ್ಶಿ ಈಶ್ವರ ಭಟ್ ಕಡಂದೇಲು , ಪ್ರಶಸ್ತಿ ವಿಜೇತ ಜೇನುತಜ್ಞ ಕುಮಾರ್ ಪೆರ್ನಾಜೆ , ಪಿ.ಜಿ ಶಂಕರ್ ನಾರಾಯಣ ಭಟ್ ದೈತೋಟ ,ಮಹಾಬಲೇಶ್ವರ ಗಿಳಿಯಾಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ವಿವಿಧ ಕ್ಷೇತ್ರಗಳಲ್ಲಿ ನಾಡಿಗೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ನೀಡಲ್ಪಡುವ ರಾಜ್ಯ ಪ್ರಶಸ್ತಿಗೆ ವಿಶ್ವದಲ್ಲಿ ಪ್ರಪ್ರಥಮವಾಗಿ ಜೇನು ಗಡ್ಡ ತೋರಿಸಿಕೊಟ್ಟ ಸಾಧಕಿ ಮಹಿಳೆ ಜೇನು ಕೃಷಿ ವಿಶಿಷ್ಟ ಬರಹಗಳು ಕಲಾಪ್ರಿಯರು ಕಲಾ ಪೋಷಕರಾಗಿ ಗುರುತಿಸಿಕೊಂಡಿರುವ ಸೌಮ್ಯ ಪೆರ್ನಾಜೆ ಇವರನ್ನು ಈಶ್ವರಮಂಗಳದಲ್ಲಿ ಗ್ರಾಮ ಗ್ರಾಮದ ಸಾಹಿತ್ಯ ಸಂಭ್ರಮ ಮೂರನೇ ಸರಣಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಇವರು ಹವ್ಯಕ ರತ್ನ ರಾಷ್ಟ್ರೀಯ ಪುರಸ್ಕೃತ ಕುಮಾರ್ ಪೆರ್ನಾಜೆ ಅವರ ಪತ್ನಿ ಇಬ್ಬರು ಮಕ್ಕಳು ನಂದನ್ ಕುಮಾರ್ , ಚಂದನ್ ಕುಮಾರ್, ತಂದೆ ರಾಮಚಂದ್ರ ಭಟ್, ದೇವಕಿ ಅವರ ಪುತ್ರಿ .