ಅಡ್ಕಾರು: ಅಂಜನಾದ್ರಿ ಆಂಜನೇಯ ಕ್ಷೇತ್ರದಲ್ಲಿ ಜಾತ್ರಾಮಹೋತ್ಸವದ ಪ್ರಯುಕ್ತ ಅಹ:ಪೂರ್ಣ ಭಜನೆ

0

ಗುಳಿಗರಾಜ ಸನ್ನಿಧಿಯಲ್ಲಿ ದೇವಕ್ರಿಯಾ ತಂಬಿಲಸೇವೆ

ಜಾಲ್ಸೂರು ಗ್ರಾಮದ ಅಡ್ಕಾರಿನ ಅಂಜನಾದ್ರಿ ಶ್ರೀ ಪ್ರಸನ್ನಾಂಜನೇಯ ಸ್ವಾಮಿ ಹಾಗೂ ಗುಳಿಗರಾಜ ಕ್ಷೇತ್ರದ ಕಾಲಾವಧಿ ಜಾತ್ರಾಮಹೋತ್ಸವದ ಪ್ರಯುಕ್ತ ಫೆ.27ರಂದು ಬೆಳಿಗ್ಗೆ ಬ್ರಹ್ಮಶ್ರೀ ವೇ. ಮೂ. ಪುರೋಹಿತ ನಾಗರಾಜ ಭಟ್ ಅವರ ನೇತೃತ್ವದಲ್ಲಿ ದೀಪಪ್ರತಿಷ್ಠೆಯಾಗಿ ವಿವಿಧ ಆಹ್ವಾನಿತ ತಂಡಗಳಿಂದ ಅಹ:ಪೂರ್ಣ ಭಜನಾ ಸೇವೆಯು ನಡೆಯಿತು.
ಬಳಿಕ ಕ್ಷೇತ್ರಪಾಲನಾದ ಗುಳಿಗರಾಜ ದೈವದ ಸನ್ನಿಧಿಯಲ್ಲಿ ದೇವಕ್ರಿಯಾ ತಂಬಿಲಸೇವೆ, ಮಧ್ಯಾಹ್ನ ಶ್ರೀ ಆಂಜನೇಯ ಸ್ವಾಮಿಗೆ ಮಹಾಪೂಜೆ , ಬ್ರಹ್ಮಸಂತರ್ಪಣೆ, ಅನ್ನಸಂತರ್ಪಣೆ ಜರುಗಿತು.


ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಆಡಳಿತ ಸಮಿತಿಯ ಪದಾಧಿಕಾರಿಗಳು, ಸೇವಾ ಸಮಿತಿಯ ಪದಾಧಿಕಾರಿಗಳು, ಭಜನಾ ಸಮಿತಿಯ ಪದಾಧಿಕಾರಿಗಳು, ಮಹಿಳಾ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ನೂರಾರು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.