ಪಾಲೆಪ್ಪಾಡಿ ಶ್ರೀ ಇರ್ವೆರ್ ಉಳ್ಳಾಕ್ಲು ದೈವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

0

ಭಕ್ತಿ,ಸಂಭ್ರಮದಿಂದ ನಡೆದ ಪಂಜುರ್ಲಿ ದೈವ, ಗುಳಿಗ ದೈವದ ನೇಮೋತ್ಸವ

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ದರ್ಖಾಸ್ತು ಶ್ರೀ ಉಳ್ಳಾಕ್ಲು ದೈವಸ್ಥಾನ ಹಾಗೂ ಪರಿವಾರ ದೈವಗಳ ದೈವಸ್ಥಾನ ಮತ್ತು ಪಂಜುರ್ಲಿ ದೈವಸ್ಥಾನದ ನವೀಕರಣ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆದಿದ್ದು ಫೆ.27 ರಂದು ಪಂಜುರ್ಲಿ ಹಾಗೂ ಗುಳಿಗ ದೈವದ ನೇಮೋತ್ಸವವು ಭಕ್ತಿ,ಸಂಭ್ರಮದಿಂದ ನಡೆಯಿತು.


ಸಂಜೆ ಭಂಡಾರ ತೆಗೆಯಲಾಯಿತು.
ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ಸಾವಿರಾರು ಜನ ಭಕ್ತಾದಿಗಳು ಅನ್ನಪ್ರಸಾದ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಡಾ.ಬಾಲಸುಬ್ರಹ್ಮಣ್ಯ ಭಟ್ ಪಾಲೆಪ್ಪಾಡಿ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಹರೀಶ್ ರಾವ್ ಉದ್ದಂಪಾಡಿ,ಆಡಳಿತ ಮಂಡಳಿ ಅಧ್ಯಕ್ಷ ಕೃಷ್ಣಪ್ಪ ಗೌಡ ನೆಕ್ರೆಪ್ಪಾಡಿ, ಮಹಿಳಾ ಸಮಿತಿ ಅಧ್ಯಕ್ಷೆ ವನಿತಾ ಧನಂಜಯ ಗೌಡ ದರ್ಖಾಸ್ತು, ಉಪ ಸಮಿತಿ ಅಧ್ಯಕ್ಷ ಪ್ರದೀಪ್ ಪಾಲೆಪ್ಪಾಡಿ,ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷರಾದ ಹೊನ್ನಪ್ಪ ಪಾಲೆಪ್ಪಾಡಿ, ನಾಗಪ್ಪ ಗೌಡ ಪಾಲೆಪ್ಪಾಡಿ, ಜಗದೀಶ ಉದ್ದಂಪಾಡಿ,ಹೊನ್ನಪ್ಪ ಉದ್ದಂಪಾಡಿ ಹಾಗೂ ಬೈಲಿನ ಹತ್ತು ಸಮಸ್ತರು ಉಪಸ್ಥಿತರಿದ್ದರು.