ಕದಿಕಡ್ಕ ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಣೆ

0

ವಿನೋದ್ ಭಾಸ್ಕರ್ ಮಹಾಬಲಡ್ಕರವರ ಪುತ್ರ ಅರುಷ್ ನ ೫ನೇ ವರ್ಷದ ಹುಟ್ಟುಹಬ್ಬವನ್ನು ಕದಿಕಡ್ಕ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು. ವೇದಿಕೆಯಲ್ಲಿ ಶ್ರೀಮತಿ ಸರಸ್ವತಿ, ಶ್ರೀಮತಿ ಲೀಲಾವತಿ, ಶ್ರೀಮತಿ ಸೌಮ್ಯ, ಶೇಖರ ಕಾಳಮ್ಮನೆ ಉಪಸ್ಥಿತರಿದ್ದರು. ಅಂಗನವಾಡಿ ಪುಟಾಣಿಗಳು ದೀಪ ಬೆಳಗಿಸಿದರು. ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಲಾಯಿತು.

ಅರುಷ್‌ನ ಪೋಷಕರು, ಮಕ್ಕಳ ಪೋಷಕರು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಗಿರಿಜಾ ಸ್ವಾಗತಿಸಿ, ವಂದಿಸಿದರು. ಅಂಗನವಾಡಿ ಸಹಾಯಕಿ ಶ್ರೀಮತಿ ಪ್ರೇಮಾ ಸಹಕರಿಸಿದರು.