ಉಪನ್ಯಾಸಕ ಗಣೇಶ್ ನಾಯಕ್ ಅವರ ಮನವು ಮಾತಾಡಿತು ಕಥಾಸಂಕಲನ ಬಿಡುಗಡೆ

0

ಉಪನ್ಯಾಸಕ ಗಣೇಶ್ ನಾಯಕ್ ಪುತ್ತೂರು ಅವರ ಮನವು ಮಾತಾಡಿತು ಕಥಾಸಂಕಲನವು ದರ್ಬೆಯ ಸಚ್ಚಿದಾನಂದ ಸೇವಾ ಸದನದಲ್ಲಿ‌ ನಡೆದ ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ದ ಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಅಣ್ಣಾ ವಿನಯಚಂದ್ರ ಬಿಡುಗಡಗೊಳಿಸಿದರು.

ವೇದಿಕೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಮಂಗಳೂರು ಇದರ ಜಂಟಿ‌ ನಿರ್ದೇಶಕ ಗೋಕುಲದಾಸ್ ನಾಯಕ್ ,ಉದ್ಯಮಿ ಕರೋಡಿ ಗೋಪಾಲಕೃಷ್ಣ ಬೋರ್ಕರ್ , ಪ್ರಗತಿಪರ ಕೃಷಿಕ ಕುಳ್ಳಾಜೆ ಈಶ್ವರ ನಾಯಕ್ ,ಉದ್ಯಮಿ ಶಿವಶಂಕರ ನಾಯಕ್ ರೈತಬಂಧು ,ಶತಮಾನೋತ್ಸವ ಸಮಿತಿ ಅಧ್ಯಕ್ಷ ಎಸ್ ಆರ್ ಸತೀಶ್ಚಂದ್ರ ,ಸಾರಸ್ವತ ಸಮೂಹ ಸಂಸ್ಥೆಗಳ ಕೇಂದ್ರೀಯ ಸಮಿತಿ ಅಧ್ಯಕ್ಷ ಉಮೇಶ್ ಪ್ರಭು ಬೆಳ್ತಂಗಡಿ ,ಪುರುಷೋತ್ತಮ ಪ್ರಭು ಮುಂಡಕೊಚ್ಚಿ ,ನಿವೃತ್ತ ವೃತ್ತ ನಿರೀಕ್ಷಕ ಮುಕುಂದ ನಾಯಕ್ ,ಶ್ರೀಮತಿ ವಿನತಾದೇವಿ‌ ಸುಳ್ಯ ,ಬದನಾಜೆ ಸ.ಪ್ರೌ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಮುನಾ ಕೆ‌.ಎಸ್ ,ಪ್ರಗತಿಪರ ಕೃಷಿಕ ರಾಮಚಂದ್ರ ಬೋರ್ಕರ್ ,ನಿವೃತ್ತ ಪಬ್ಲಿಕ್‌ ಪ್ರಾಸಿಕ್ಯೂಟರ್ ಉದಯ ಶಂಕರ ಕುಕ್ಕಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು .ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ದ ಅಧ್ಯಕ್ಷ ಬಾಲಕೃಷ್ಣ ನಾಯಕ್ ಆಜೇರು ಅಧ್ಯಕ್ಷತೆ ವಹಿಸಿದ್ದರು .ಸಂಘದ ಕಾರ್ಯದರ್ಶಿ ಮೂಲಚಂದ್ರ ಕಾಂಚನ ಕಾರ್ಯಕ್ರಮ ನಿರೂಪಿಸಿದರು .