ಪೆರಾಜೆ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ದೈವಸ್ಥಾನಕ್ಕೆ ಕುತ್ತಿಕೋಲು ತಂಬುರಾಟಿ ಭಗವತಿ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರ ಭೇಟಿ

0

ವಯನಾಟ್ ಕುಲವನ್ ದೈವಕಟ್ಟು ಮಹೋತ್ಸವ ಸಿದ್ಧತೆಯಲ್ಲಿರುವ ಪೆರಾಜೆ ಕುಂಬಳಚೇರಿ ಶ್ರೀ ವಯನಾಟ್ ಕುಲವನ್ ದೈವಸ್ಥಾನಕ್ಕೆ ಕುತ್ತಿಕೋಲು ಶ್ರೀ ತಂಬುರಾಟಿ ಭಗವತಿ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ರಾದ ಕುಂಞಿ ಕಣ್ಣ ಬೇಡಗಂ, ಕಾರ್ಯದರ್ಶಿ ಶ್ರೀಧರನ್ ಪರಯಂಬಳ್ಳ, ಕೋಶಾಧಿಕಾರಿ ಅನಿಲ್ ರವರು ಭೇಟಿ ನೀಡಿದರು.

ಅಂತಿಮ ಹಂತದ ಸಿದ್ಧತೆ ಪರಿಶೀಲನೆ ನಡೆಸಿ ಇದುವರೆಗೂ ನಡೆದಿರುವ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭ ದಲ್ಲಿ ಮಹೋತ್ಸವ ಸಮಿತಿಯ ಅಧ್ಯಕ್ಷ ರಾದ ಹೊನ್ನಪ್ಪ ಕೊಳಂಗಾಯ, ಆಡಳಿತ ಮಂಡಳಿಯ ಅಧ್ಯಕ್ಷ ಪದ್ಮಯ್ಯ ಕುಂಬಳಚೇರಿ ಯವರು ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಹೋತ್ಸವ ಸಮಿತಿಯ ಸಂಘಟನಾ ಕಾರ್ಯದರ್ಶಿ ಉದಯ ಕುಂಬಳಚೇರಿ, ಉಪಾಧ್ಯಕ್ಷ ರಾಧಾಕೃಷ್ಣ ಪರಿವಾರಕಾನ, ಕಾರ್ಯಧ್ಯಕ್ಷ ಶ್ರೀಜಿತ್, ಕಾರ್ಯದರ್ಶಿ ಪ್ರದೀಪ್, ಒಳಾಂಗಣ ಸಮಿತಿಯ ಉಪಸಂಚಾಲಕ ಅಭಿಷೇಕ್ ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಸದಸ್ಯರುಗಳು ತಂಬುರಾಟಿ ಭಗವತಿ ಸೇವಾ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.