ಬೆಳ್ಳಾರೆ ಸರಕಾರಿ ಆಸ್ಪತ್ರೆಯ ಹಳೆ ಕಟ್ಟಡ ಕೆಡವುತ್ತಿರುವ ವೇಳೆ ಗೋಡೆ ಕುಸಿದು ಕಾರ್ಮಿಕ‌ ಮೃತ್ಯು

0

ಬೆಳ್ಳಾರೆ ಸರಕಾರಿ ಆಸ್ಪತ್ರೆಯ ಹಳೆ ಕಟ್ಟಡ ಕೆಡವುತ್ತಿರುವ ವೇಳೆ ಗೋಡೆ ಕುಸಿದು ಕಾರ್ಮಿಕ‌ ಮೃತಪಟ್ಟ ಘಟನೆ ಇಂದು ಅಪರಾಹ್ನ ಸಂಭವಿಸಿದೆ.

ಬೆಳ್ಳಾರೆ ಸರಕಾರಿ ಆಸ್ಪತ್ರೆಗೆ ಹೊಸ ಕಟ್ಟಡ ನಿರ್ಮಾಣಗೊಳ್ಳುತ್ತಿದ್ದು, ಹಳೆ ಕಟ್ಟಡ ಕೆಡವುವ ಕಾರ್ಯ ನಡೆಯುತ್ತಿತ್ತು. ಇದರ ಗುತ್ತಿಗೆ ತೆಗೆದುಕೊಂಡವರು ತಮ್ಮ ಕಾರ್ಮಿಕರ ಮುಖಾಂತರ ಇಂದು ಗೋಡೆ ಕೆಡವುವ ಕಾರ್ಯ ಮಾಡುತ್ತಿದ್ದರು. ಊಟದ ವಿರಾಮದ ನಂತರ ಗೋಡೆ ಕೆಡವುತ್ತಿದ್ದಾಗ ಅದು ಕಾರ್ಮಿಕ ಮಂಜುನಾಥ ( 23) ಎಂಬವರ ಮೇಲೆ ಬಿತ್ತು .‌ಕಲ್ಲುಗಳ ಅಡಿಗೆ ಸಿಲುಕಿದ ಅವರನ್ನು ಇತರ ಕಾರ್ಮಿಕರು ಹೊರತೆಗೆದು ಕೂಡಲೇ ಸುಳ್ಯ ಆಸ್ಪತ್ರೆಗೆ ಕೊಂಡೊಯ್ದರಾದರೂ ಆ ವೇಳೆಗಾಗಲೇ ಅವರು ಕೊನೆಯುಸಿರೆಳೆದಿದ್ದರು.

ಮೃತ ಮಂಜುನಾಥ ವಿಜಯಪುರ ಜಿಲ್ಲೆಯ ನೆರೆಬೊಮ್ಮನಹಳ್ಳಿ ಬಸವರಾಜಪ್ಪ ಎಂಬವರ ಪುತ್ರ. ಇವರು ಹಾಗೂ ಇವರ ಸಂಬಂಧಿಕರು ಎರಡು ತಿಂಗಳ ಹಿಂದೆ ಬೆಳ್ಳಾರೆಗೆ ಆಗಮಿಸಿದ್ದು, ಇಲ್ಲಿ ಕೆಲಸ ಮಾಡಿಕೊಂಡಿದ್ದರು.