ಬೆಳ್ಳಾರೆ : ಜ್ಞಾನದೀಪದಲ್ಲಿ ರಾಷ್ಟ್ರೀಯ ಮಹಿಳಾ ದಿನಾಚರಣೆ
ಸನ್ಮಾನ, ತರಬೇತು ಕಾರ್ಯಕ್ರಮ

0


ಜೇಸಿಐ ಬೆಳ್ಳಾರೆ, ಯುವಜೇಸಿ ವಿಭಾಗ ಬೆಳ್ಳಾರೆ ಇವುಗಳ ಆಶ್ರಯದಲ್ಲಿ ರಾಷ್ಟ್ರೀಯ ಮಹಿಳಾ ದಿನಾಚಾರಣೆ ಅಂಗವಾಗಿ ಸನ್ಮಾನ ಮತ್ತು ತರಬೇತು ಕಾರ್ಯಕ್ರಮ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜೇಸಿಐನ ವಲಯ ತರಬೇತುದಾರರಾದ ಸ್ವಾತಿ ಜಗನ್ನಾಥ ರೈ ಉದ್ಘಾಟಿಸಿ ಶುಭಹಾರೈಸಿದರು. ಬೆಳ್ಳಾರೆ ಗ್ರಾಮ ಪಂಚಾಯತ್ ನ ತ್ಯಾಜ್ಯ ವಿಲೇವಾರಿ ವಾಹನದ ಚಾಲಕಿ ಸವಿತಾ ನವೀನ್ ಪಡ್ಪು ಅವರನ್ನು ಸನ್ಮಾನಿಸಲಾಯಿತು.

ಕೆಲಸದ ಸಮಯ ನಿರ್ವಹಣೆ ಬಗ್ಗೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ ವಿದ್ಯಾರ್ಥಿ ಶಿಕ್ಷಕಿಯರುಗಳಿಗೆ ಸ್ವಾತಿ ಜಗನ್ನಾಥ ರೈ ತರಬೇತಿ ನೀಡಿದರು. ಬೆಳ್ಳಾರೆ ಜೇಸಿಐ ಅಧ್ಯಕ್ಷ ರವೀಂದ್ರನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಲಯಾಧಿಕಾರಿ ನಿರ್ಮಲ ಜಯರಾಮ್, ಜ್ಞಾನದೀಪ ಸಂಸ್ಥೆಯ ನಿರ್ದೇಶಕ ಉಮೇಶ್ ಮಣಿಕ್ಕಾರ ಉಪಸ್ಥಿತರಿದ್ದರು. ಜೇಸಿ ಪ್ರಸಾದ್ ಸೇವಿತ ಸ್ವಾಗತಿಸಿದರು. ಕಾರ್ಯದರ್ಶಿ ಅನಂದ ಉಮಿಕ್ಕಳ ವಂದಿಸಿದರು.