ಇಂದು ಮತ್ತು ನಾಳೆ ಪೈಚಾರು ಶಾಂತಿನಗರ ಮುತ್ತಪ್ಪ ತಿರುವಪ್ಪ ದೈವಸ್ಥಾನದಲ್ಲಿ ನೇಮೋತ್ಸವ

0

ಸುಳ್ಯ ಕಸಬಾದ ಪೈಚಾರು ಶಾಂತಿನಗರ ಶ್ರೀ ಮುತ್ತಪ್ಪ -ತಿರುವಪ್ಪ ದೈವರಾಧನಾ ಸೇವಾ ಸಮಿತಿ ,ಶ್ರೀ ಮುತ್ತಪ್ಪ ತಿರುವಪ್ಪ ಉತ್ಸವ ಸಮಿತಿ ಹಾಗೂ ಮುತ್ತಪ್ಪ ಮಹಿಳಾ ಸಮಿತಿ ಇದರ ಜಂಟಿ ಆಶ್ರಯದಲ್ಲಿ ವರ್ಷಂಪ್ರತಿ ಜರುಗುವ ಶ್ರೀ ಮುತ್ತಪ್ಪ -ತಿರುವಪ್ಪ ದೈವಗಳ ಕಾಲಾವಧಿ ನೇಮೋತ್ಸವವು ಶಾಂತಿನಗರ ಮುತ್ತಪ್ಪ ತಿರುವಪ್ಪ ದೈವಸ್ಥಾನ (ಮಡಪುರ)ದಲ್ಲಿ ಇಂದು ಮತ್ತು ನಾಳೆ ನಡೆಯಲಿರುವುದು.
ಇಂದು ಬೆಳಗ್ಗೆ ಗಣಪತಿ ಹವನವಾಗಿ ಸಂಜೆ ಗಂಟೆ 4.00 ರ ತನಕ ಭಜನಾ ಕಾರ್ಯಕ್ರಮ ಹಾಗೂ ವಿಶೇಷವಾಗಿ ಕುಣಿತ ಭಜನೆಯು ನಡೆಯಲಿದೆ. ಸಂಜೆ 5.00 ಕ್ಕೆ ಪೈಂಗುತ್ತಿ ಹಾಗೂ ಶ್ರೀ ಮುತ್ತಪ್ಪ ದೈವದ ಮಲೆಯರ್ಕಲ್ ನಡೆದು ರಾತ್ರಿ ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಗಂಟೆ 8.00 ರಿಂದ ಶ್ರೀ ಮುತ್ತಪ್ಪ ದೈವದ ನೇಮ (ಬೆಳ್ಳಾಟಂ) ವಾಗಿ ಸಾರ್ವಜನಿಕ ಅನ್ನ ಸಂತರ್ಪಣೆಯಾಗಲಿರುವುದು. ಬಳಿಕ ರುಮಾಲು ಕಟ್ಟುವುದು. ಮರುದಿನ ಪ್ರಾತ:ಕಾಲ ಶ್ರೀ ಮುತ್ತಪ್ಪ ತಿರುವಪ್ಪ ದೈವಗಳ ನೇಮೋತ್ಸವ ಜರುಗಲಿರುವುದು.