ಸುಳ್ಯದ ನೂತನ ನಿರೀಕ್ಷಣಾ ಮಂದಿರಕ್ಕೆ ಗುದ್ದಲಿಪೂಜೆ

0

2 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ ಸುಳ್ಯದ ಐ.ಬಿ.

ಸುಳ್ಯ ಬೀರಮಂಗದಲ್ಲಿರುವ ಲೋಕೋಪಯೋಗಿ ಇಲಾಖೆಯ ನಿರೀಕ್ಷಣಾ ಮಂದಿರದ ಹೊಸ ಕಟ್ಟಡಕ್ಕೆ ಲೋಕೋಪಯೋಗಿ ಇಲಾಖೆಯ 5054ರಡಿಯಲ್ಲಿ 2 ಕೋಟಿ ರೂ ಮಂಜೂರು ಗೊಂಡಿದ್ದು, ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ಮಾ.11 ರಂದು ನಡೆಯಿತು.

ನೂತನ ಕಟ್ಟಡಕ್ಕೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಗುದ್ದಲಿಪೂಜೆ ನೆರವೇರಿಸಿದರು.

ಶಿವಪ್ರಸಾದ್ ಕೆದಿಲಾಯರ ಪೌರೋಹಿತ್ಯದಲ್ಲಿ ಪೂಜಾ ಕಾರ್ಯಕ್ರಮ ನಡೆಯಿತು.

ಮೀನುಗಾರಿಕಾ ನಿಗಮಾಧ್ಯಕ್ಷ ಎ.ವಿ. ತೀರ್ಥರಾಮ, ನ.ಪಂ.‌ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಬಿಜೆಪಿ ಮಂಡಲಾಧ್ಯಕ್ಷ ಹರೀಶ್ ಕಂಜಿಪಿಲಿ,
ತಾ.ಪಂ. ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಮಾಜಿ ಸ್ಥಾಯಿ‌ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ವಿನಯ ಕುಮಾರ್ ಮುಳುಗಾಡು, ನ.ಪಂ. ಉಪಾಧ್ಯಕ್ಷೆ ಸರೋಜಿನಿ ಪೆಲತಡ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಕಿಶೋರಿ ಶೇಟ್, ಸದಸ್ಯರುಗಳಾದ ಬುದ್ಧ ಜಿ ನಾಯ್ಕ್, ಶೀಲಾ ಕುರುಂಜಿ, ವಾರ್ಡ್ ಸದಸ್ಯ ಡೇವಿಡ್ ಧೀರಾ ಕ್ರಾಸ್ತ, ಚಂದ್ರಾ ಕೋಲ್ಚಾರ್, ಸುನಿಲ್ ಕೇರ್ಪಳ, ಬಯಂಬು, ಸುಭೋದ್ ಶೆಟ್ಟಿ ಮೇನಾಲ, ಸೋಮನಾಥ ಪೂಜಾರಿ, ಹರೀಶ್ ಬೂಡುಪನ್ನೆ, ಸುಪ್ರಿತ್‌ ಮೋಂಟಡ್ಕ
, ಪಿಡಬ್ಲ್ಯೂಡಿ ಎ.ಇ.ಇ. ಲೋಕೇಶ್, ಇಂಜಿನಿಯರ್ ಪರಮೇಶ್ವರ, ಗುತ್ತಿಗೆದಾರ ವಸಂತ್ ಶೆಟ್ಟಿ, ಇಂಜಿನಿಯರ್ ಪ್ರಶಾಂತ್ ಕಾಯರ್ತೋಡಿ ಮೊದಲಾದವರಿದ್ದರು.