ಮಾರ್ಚ್ 19: ಪೇರಡ್ಕದಲ್ಲಿ ನೂರೇ ಅಜ್ಮೀರ್ ಆಧ್ಯಾತ್ಮಿಕ ಮಜ್ಲೀಸ್ ಹಾಗೂ ಮಜ್ಲೀಸ್ ನ್ನೂರ್ ವಾರ್ಷಿಕ

0

ಎಸ್ ಕೆ ಎಸ್ ಎಸ್ ಎಫ್ ಗೂನಡ್ಕ ಶಾಖೆ ವತಿಯಿಂದ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ನೂರೇ ಅಜ್ಮೀರ್ ಆಧ್ಯಾತ್ಮಿಕ ಮಜ್ಲೀಸ್ ಹಾಗೂ ಮಜ್ಲೀಸ್ ನ್ನೂರ್ ವಾರ್ಷಿಕ ಕಾರ್ಯಕ್ರಮ ಮಾರ್ಚ್ 19ರಂದು ಪೇರಡ್ಕ ದರ್ಗಾ ಶರೀಫ್ ವಠಾರದಲ್ಲಿ ನಡೆಯಲಿದೆ ಎಂದು ಗೂನಡ್ಕ ಶಾಖೆ ಎಸ್ ಕೆ ಎಸ್ ಎಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಮುಟ್ಟೆಂಗಾರ್ ಇಂದು ಸುಳ್ಯ ಪ್ರೆಸ್ ಕ್ಲಬ್ಬಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಹೇಳಿದರು.

ಮಾರ್ಚ್ 19ರಂದು ಸಂಜೆ 6 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದ್ದು ಸುಮಾರು 5000ಕ್ಕೂ ಹೆಚ್ಚು ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ನೂರೇ ಅಜ್ಮೀರ್ ಆಧ್ಯಾತ್ಮಿಕ ಮಜ್ಲೀಸ್ ಆನ್ಲೈನ್ ಮೂಲಕ ದಿನಂಪ್ರತಿ ನಡೆಯುತ್ತಿದ್ದು ಲಕ್ಷಾಂತರ ಮಂದಿ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಇದೊಂದು ಪ್ರಾರ್ಥನಾ ಸಂಗಮವಾಗಿದ್ದು ಸಾವಿರಾರು ಮಂದಿ ರೋಗಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಗುಣಮುಖರಾದ ನಿರ್ದಶನಗಳು ಇವೆ.
ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ಈ ಕಾರ್ಯಕ್ರಮ ನಡೆಯುತ್ತಿದ್ದು ಎಸ್ ಕೆ ಎಸ್ ಎಸ್ ಎಫ್ ಸಂಘಟನೆಯ ಅದೀನದಲ್ಲಿ ಬರುವ ವಿಕಾಯ, ಟ್ರೆಂಡ್, ಸೇರಿದಂತೆ ಉಪಸಂಘಟನೆಗಳ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಸಯ್ಯದ್ ಜೈನುಲ್ ಅಭಿದಿನ್ ತಂಗಳ್ ಕುಂನ್ನುಂಗೈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಈ ಕಾರ್ಯಕ್ರಮದ ನೇತೃತ್ವವನ್ನು ಉಸ್ತಾದ್ ವಲಿಯುದ್ದೀನಿ ಫೈಝಿ ವಾಝಕಾಡ್ ವಹಿಸಲಿದ್ದಾರೆ. ಕಾರ್ಯಕ್ರಮದ ವೇದಿಕೆಯಲ್ಲಿ ಹಿರಿಯ ಪಂಡಿತರಾದ ಹುಸೈನ್ ದಾರಿಮಿ ರಂಜಿಲಾಡಿ, ರಿಯಾಜ್ ಫೈಝಿ ಎಮ್ಮೆಮಾಡು ಮೊದಲಾದ ಧಾರ್ಮಿಕ ಗುರುಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಇದೇ ಕಾರ್ಯಕ್ರಮದ ವೇದಿಕೆಯಲ್ಲಿ ಮಜಿಲೀಸ್ ನೂರ್ ವಾರ್ಷಿಕ ಕಾರ್ಯಕ್ರಮವನ್ನು ನಡೆಸಲಾಗುತ್ತಿದ್ದು ರಾತ್ರಿ ಸಮಯ 11 ಗಂಟೆಗೆ ಸರಿಯಾಗಿ ಅನ್ನದಾನ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ ಎಂ ಶಹಿದ್, ನೂರೆ ಅಜ್ಮೀರ್ ಕಾರ್ಯಕ್ರಮದ ಸ್ಟೇಟ್ ಕ್ಯಾಪ್ಟನ್ ಮುನೀರ್ ದಾರಿಮಿ, ಗೂನಡ್ಕ ಎಸ್ ಕೆ ಎಸ್ ಎಸ್ ಎಫ್ ಶಾಖಾ ಅಧ್ಯಕ್ಷ ಸಾಜೀದ್ ಆಜ್ಹ್ಹರಿ, ಎಸ್ ಕೆ ಎಸ್ ಎಸ್ ಎಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸಂಘಟನಾ ಕಾರ್ಯದರ್ಶಿ ಅಕ್ಬರ್ ಕರಾವಳಿ, ಗೂನಡ್ಕ ಎಸ್ ಕೆ ಎಸ್ ಎಸ್ ಎಫ್ ಉಪ ಸಮಿತಿ ಕಾರ್ಯದರ್ಶಿ ಜುನೈದ್ ತೆಕ್ಕಿಲ್ ಉಪಸ್ಥಿತರಿದ್ದರು.