ಪೈಚಾರು : ಬೈಕಿಗೆ ಗುದ್ದಿ ಪರಾರಿಯಾದ ಕಾರು – ಬೈಕ್ ಸವಾರನಿಗೆ ಗಾಯ

0

ಸುಳ್ಯ ಪೈಚಾರು ಜಂಕ್ಷನ್ ಬಳಿ ಬೈಕೊಂದಕ್ಕೆ ಶಿಫ್ಟ್ ಕಾರು ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದ್ದು, ಘಟನೆಯಿಂದ ಬೈಕ್ ಸವಾರನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಸಂಭವಿಸಿದೆ.

ಕೋಲ್ಚಾರು ನಿವಾಸಿ ಪ್ರಸನ್ನ ಕುಮಾರ್ ಎಂಬುವವರು ಪೈಚಾರಿನಿಂದ ಸುಳ್ಯಕ್ಕೆ ಬರುತ್ತಿದ್ದ ಸಂದರ್ಭ ಸುಳ್ಯ ಕಡೆಯಿಂದ ಪುತ್ತೂರು ಕಡೆ ತೆರಳುತ್ತಿದ್ದ ಬಿಳಿ ಬಣ್ಣದ ಶಿಫ್ಟ್ ಕಾರು ಬೈಕ್‌ಗೆ ಡಿಕ್ಕಿ ಹೊಡೆಯಿತು. ಕಾರು ಗುದ್ದಿದ ಸಂದರ್ಭ ಪ್ರಸನ್ನ ಕುಮಾರ್ ರಸ್ತೆಗೆ ಬಿದ್ದಿದ್ದು ಸಣ್ಣಪುಟ್ಟ ಗಾಯವಾಗಿ, ಸುಳ್ಯ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದರು. ಬಳಿಕ ಘಟನೆಯ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದಾರೆ.