ದೇವಚಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಿಕ್ಷಣ ಇಲಾಖೆಯಿಂದ ಮಂಜೂರಾಗಿರುವ ಎರಡು ಕೊಠಡಿ ಮತ್ತು ರಂಗಮಂದಿರಕ್ಕೆ ಮೀನುಗಾರಿಕೆ ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್. ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ವೆಂಕಟ್ ವಳಲಂಬೆ, ದೇವಚಳ್ಳ ಗ್ರಾ.ಪಂ.ಸದಸ್ಯೆ ಪ್ರೇಮಾಲತಾ ಕೇರ, ನೆ.ಕೆಮ್ರಾಜೆ ಗ್ರಾ.ಪಂ.ಸದಸ್ಯರಾದ ರಾಮಚಂದ್ರ ಪ್ರಭು, ವಂದನಾ ಹೊಸ್ತೋಟ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿ ಪ್ರಸಾದ್ ಬಿ.ವಿ., ಎಲಿಮಲೆ ಸರಕಾರಿ ಪ್ರೌಢಶಾಲೆಯ ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಜಯಂತ ಹರ್ಲಡ್ಕ, ನಾಗರಾಜ ಕೇಪಳಕಜೆ, ವಿಶ್ವನಾಥ ಕಾಯರಡಿ ಮತ್ತಿತರರು ಉಪಸ್ಥಿತರಿದ್ದರು.
ಎಸ್.ಡಿ.ಎಂ.ಸಿ. ಅಧ್ಯಕ್ಷ ಜಯಪ್ರಕಾಶ್ ಕುಚ್ಚಾಳ ಸ್ವಾಗತಿಸಿ, ಮುಖ್ಯೋಪಾಧ್ಯಾಯ ಶ್ರೀಧರ ಗೌಡ ವಂದಿಸಿದರು.