ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಕಲ್ಕುಡ ಕಲ್ಲುರ್ಟಿ ದೈವಸ್ಥಾನ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

0

ಪೆರುವಾಜೆ ಗ್ರಾಮದ ಶ್ರೀ ಜಲದುರ್ಗಾದೇವಿ ದೇವಸ್ಥಾನ ಇಲ್ಲಿನ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನಿರ್ಮಾಣ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು 2,00,000 ರೂಪಾಯಿಗಳ ಅನುದಾನ ಮಂಜೂರು ಮಾಡಿದ್ದು,ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ತಾಲೂಕಿನ ಯೋಜನಾಧಿಕಾರಿಗಳಾದ ನಾಗೇಶ್. ಪಿ ಯವರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಹಸ್ತಾಂತರಿಸಿದರು.


ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ, ಸಮಿತಿ ಸದಸ್ಯರಾದ ವೆಂಕಟಕೃಷ್ಣ ರಾವ್, ಕಛೇರಿ ಸಿಬ್ಬಂದಿ ವಸಂತ ಆಚಾರ್ಯ,ಬೆಳ್ಳಾರೆ ಜನಜಾಗೃತಿ ವಲಯಾಧ್ಯಕ್ಷರಾದ ಆನಂದ ಗೌಡ ವಲಯ ಮೇಲ್ವಿಚಾರಕಾರದ ವಸಂತ ಎಲ್, ಸೇವಾಪ್ರತಿನಿಧಿ ಶ್ರೀಮತಿ ಯಶೋಧ, ಪೆರುವಾಜೆ ಒಕ್ಕೂಟದ ಅಧ್ಯಕ್ಷರಾದ ಸುಂದರ ನಾಯ್ಕ, ಹಾಗೂ ಪಧಾಧಿಕಾರಿಗಳು ಉಪಸ್ಥಿತರಿದ್ದರು.