ಕೊಡಿಯಾಲ ಗ್ರಾಮ ಪಂಚಾಯತ್ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಿಲಾನ್ಯಾಸ, ಲೋಕಾರ್ಪಣೆಯ ಆಮಂತ್ರಣ ಬಿಡುಗಡೆ

0

ಸ್ವಚ್ಛತಾ ಅಭಿಯಾನ ಸಂಭ್ರಮ-2 ಕೊಡಿಯಾಲ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಗಳ ಶಿಲಾನ್ಯಾಸ ಹಾಗೂ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಮಾ.15 ರಂದು ಕಲ್ಲಗದ್ದೆ ಶ್ರೀ ಸುಬ್ರಮಣ್ಯ ದೇವಸ್ಥಾನದಲ್ಲಿ ನಡೆಯಿತು.
ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ನಡುಬೈಲು ಕೇರ್ಪಡರವರು ಆಮಂತ್ರಣ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಪುಷ್ಪಾವತಿ ಬಾಳಿಲ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ಜಾಹ್ನವಿ ಕಾಂಚೋಡ್, ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರದೀಪ್ ರೈ ಅಜರಂಗಳ, ಪಿ ಡಿ ಒ ಜಯಂತ್ ಯು ಬಿ, ದೇವಸ್ಥಾನದ ಅರ್ಚಕರು ಶಿವಕುಮಾರ್ ಭಟ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.