ಅಮರ ಸಂಘಟನಾ ಸಮಿತಿ ವತಿಯಿಂದ ಕ್ರಿಕೆಟ್ ಪಂದ್ಯಾಟ

0

ಸುಳ್ಯ ಅಮರ ಸಂಘಟನಾ ಸಮಿತಿ ವತಿಯಿಂದ 30 ಗಜಗಳ ಮುಕ್ತ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಮಾ. 12 ರಂದು ಪೈಲಾರು ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಬಹುಮಾನ ವಿತರಣಾ ಸಮಾರಂಭಧ ಅಧ್ಯಕ್ಷತೆಯನ್ನು ಅಮರ ಸಂಘಟನಾ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಲಾಲ್ ಪೈಲಾರು ವಹಿಸಿದ್ದರು.


ವೇದಿಕೆಯಲ್ಲಿ ಗಡಿನಾಡ ಧ್ವನಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ನೀಡುವ ಸಮಾಜ ಸೇವಾ ಭೂಷಣ ರಾಜ್ಯ ಪ್ರಶಸ್ತಿ ಪುರಸ್ಕೃತ ಶೈಲೇಶ್ ಅಂಬೆಕಲ್ಲು ಇವರನ್ನು ಸನ್ಮಾನಿಸಲಾಯಿತು, ವೇದಿಕೆಯಲ್ಲಿ ನಿರಂಜನ ಕೋಡ್ತುಗುಳಿ, ಮನೋಜ್ ಪಡ್ಪು ಉಪಸ್ಥಿತರಿದ್ದರು.


ರಜನಿಕಾಂತ್ ಉಮ್ಮಡ್ಕ ಸ್ವಾಗತಿಸಿ, ಪ್ರದೀಪ್ ಬೊಳ್ಳೂರು ವಂದಿಸಿದರು, ಶಶಿಕಾಂತ್ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು.
ಪಂದ್ಯಾಟದಲ್ಲಿ 4ಜಿ ದುಗಲಡ್ಕ ತಂಡ ಪ್ರಥಮ ಸ್ಥಾನ ಗಳಿಸಿತು.ನಾಗಶ್ರೀ ಪೈಲಾರು ತಂಡ ದ್ವಿತೀಯ ಸ್ಥಾನ ಗಳಿಸಿಕೊಂಡಿತು.