ಶ್ರೀ ಎಡಮಲೆ ಇರ್ವೆರ್ ಉಳ್ಳಾಕುಲು ಮತ್ತು ಪರಿವಾರ ದೈವಗಳ ವಾರ್ಷಿಕ ನೇಮೋತ್ಸವ ಸಂಪನ್ನ

0

ಐವರ್ನಾಡು ಗ್ರಾಮದ ಶ್ರೀ ಎಡಮಲೆ ಇರ್ವೆರ್ ಉಳ್ಳಾಕುಲು ಮತ್ತು ಪರಿವಾರ ದೈವಗಳ ವಾರ್ಷಿಕ
ನೇಮೋತ್ಸವವು ಮಾ.18 ಮತ್ತು ಮಾ.19 ರಂದು ಭಕ್ತಿ,ಸಂಭ್ರಮದಿಂದ ನಡೆಯಿತು.


ಮಾ.12 ರಂದು ಮುಹೂರ್ತದ ಗೊನೆ ಕಡಿಯಲಾಯಿತು.
ಮಾ.18 ರಂದು ಬೆಳಿಗ್ಗೆ ಸ್ಥಳ ಶುದ್ಧಿ, ಆಯುಧ ಶುದ್ಧಿ, ತಂಬಿಲ ಸೇವೆ ನಡೆಯಿತು.
ಸಂಜೆ ನೂಜಾಲು ಮಾಳ್ಯದಿಂದ ಭಂಡಾರ ತರಲಾಯಿತು.
ರಾತ್ರಿ ಮುಡಿಯಾಗಿ ಪಲಯ ನೇಮ ನಡಾವಳಿ ನಡೆಯಿತು.
ಮಾ.19 ರಂದು ಬೆಳಿಗ್ಗೆ ಮೆಗ್ಯ ನೇಮ ನಡಾವಳಿ ಪ್ರಾರಂಭವಾಯಿತು, ನಂತರ ಪ್ರಸಾದ ವಿತರಣೆ, ಬಟ್ಟಲು ಕಾಣಿಕೆ ಗಂಟೆ 11.30 ಕ್ಕೆ ನಾಯರ್ ದೈವದ ನೇಮ ನಡೆಯಿತು.


ಮಧ್ಯಾಹ್ನ ಪುರುಷ ದೈವದ ಮತ್ತು ಉಪದೈವಗಳ ಕೋಲ ನಡೆಯಿತು.
ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ಸಂಜೆ ದೈವದ ಭಂಡಾರವನ್ನು ನೂಜಾಲು ಮಾಳ್ಯಕ್ಕೆ ಸಾಗಿಸಲಾಯಿತು.
ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸತೀಶ್ ಎಡಮಲೆ ,
ನಾಲ್ಕುಮನೆ ಆಡಳ್ತೆದಾರರಾದ ಕುಳ್ಳಂಪಾಡಿ ಎಲ್ಯಣ್ಣ ಗೌಡ , ಎಡಮಲೆ ಗುರುಪ್ರಸಾದ್, ಕೀಲಾಡಿ ರಾಮಚಂದ್ರ ಗೌಡ, ಮಿತ್ತಮೂಲೆ ದಾಮೋದರ ಗೌಡ, ಆಡಳ್ತೆದಾರರಾದ ಆರಿಕಲ್ಲು ಗಿರಿಧರ ಗೌಡ, ಬಿರ್ಮುಕಜೆ ಗಂಗಾಧರ ಗೌಡ,ಕುಳ್ಳಂಪಾಡಿ ನೀಲಪ್ಪ ಗೌಡ, ಮಿತ್ತಮೂಲೆ ಮೋನಪ್ಪ ಗೌಡ, ಕತ್ಲಡ್ಕ ಜಯರಾಮ ಗೌಡ, ಸಾರಕರೆ ರುಕ್ಮಯ್ಯ ಪೂಜಾರಿ, ಶಾಂತಿಮೂಲೆ ಪುರಂದರ ನಾಯ್ಕ ಹಾಗೂ ಊರ ,ಪರವೂರ
ನೂರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.