ಬೆಟ್ಟಂಪಾಡಿ ಮಂಜುನಾಥೇಶ್ವರ ಭಜನಾ ಮಂದಿರದ ಪ್ರತಿಷ್ಠಾ ಮಹೋತ್ಸವ ಮತ್ತು ಆರ್ಧ ಏಕಾಹ ಭಜನೆಯ ಆಮಂತ್ರಣ ಬಿಡುಗಡೆ

0

ಸುಳ್ಯ ಕಸಬಾದ ಬೆಟ್ಟಂಪಾಡಿ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಮತ್ತು ದ್ವಿತೀಯ ವರ್ಷದ ಏಕಾಹ ಭಜನಾ ಕಾರ್ಯಕ್ರಮ ಎ.12 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆಯು ಮಾ.21 ರಂದು ಬೆಳಗ್ಗೆ ಮಂದಿರದ ವಠಾರದಲ್ಲಿ ನಡೆಯಿತು. ಮಂದಿರದ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಸ್ಥಳೀಯ ಭಕ್ತಾದಿಗಳು ಉಪಸ್ಥಿತರಿದ್ದರು.