ಅಡ್ಕಾರು : ಚಾಲಕನ ನಿಯಂತ್ರಣ ತಪ್ಪಿ ಗುಡ್ಡೆಗೆ ಹತ್ತಿದ ಕಾರು

0

ಸುಳ್ಯ ಮಾಣಿ ಮೈಸೂರು ಹೆದ್ದಾರಿ ಅಡ್ಕಾರು ಬಳಿ ಚಾಲಕನ ನಿಯಂತ್ರಣ ತಪ್ಪಿಕಾರು ರಸ್ತೆಯ ಗುಡ್ಡೆಯಮೇಲೆ ಏರಿ ಪಲ್ಟಿಯಾದ ಘಟನೆ ಇಂದು ಸಂಜೆ ವರದಿಯಾಗಿದೆ.

ಕಾಸರಗೋಡಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಅರಂತೋಡು ಮೂಲದ ಅಬ್ದುಲ್ ಖಾದರ್ ಪಟೇಲ್ ಎಂಬುವರ ಕುಟುಂಬಸ್ಥರು ಪ್ರಯಾಣಿಸುತ್ತಿದ್ದ ಕಾರಿನಲ್ಲಿ ನಾಲ್ಕು ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ.ಘಟನೆಯಿಂದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.