ಕೈ ತಪ್ಪಿದ ಕಾಂಗ್ರೆಸ್ ಟಿಕೆಟ್;
ತುರ್ತು ಸಭೆ ಕರೆದ ನಂದಕುಮಾರ್ ಅಭಿಮಾನಿಗಳ ಬಳಗ

0

ಕೆಪಿಸಿಸಿ ಸದಸ್ಯ ಹೆಚ್ ಎಂ ನಂದಕುಮಾರ್ ರು ಸುಳ್ಯ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು, ಅಭ್ಯರ್ಥಿ ಸ್ಥಾನ ಕೈ ತಪ್ಪಿರುವ ಹಿನ್ನೆಲೆಯಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರು, ಮತ್ತು ನಂದಕುಮಾರ್ ಅಭಿಮಾನಿಗಳ ತುರ್ತು ಸಭೆಯನ್ನು ಕರೆದಿದ್ದಾರೆ.
ಮಾ. 26.ರಂದು ಆದಿತ್ಯವಾರ ಪೂ. ಗಂಟೆ 10:30ಗಂಟೆಗೆ ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಸಭೆ ಕರೆಯಲಾಗಿದೆ.
ಸುಳ್ಯ ಬ್ಲಾಕ್ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಂದ ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತರು, ಮತ್ತು ನಂದಕುಮಾರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ನಂದಕುಮಾರ್ ಅಭಿಮಾನಿ ಬಳಗದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.