ಕ್ಷೇತ್ರದ ಜನ ನೊಂದಿದ್ದಾರೆ, ಚುನಾವಣೆಯಲ್ಲಿ ಬದಲಾವಣೆ ನಿಶ್ಚಿತ

0


ಕಾಂಗ್ರೆಸ್ ಟಿಕೆಟ್ ಘೋಷಣೆಯ ಬಳಿಕ ಜಿ. ಕೃಷ್ಣಪ್ಪ ಹೇಳಿಕೆ


ಭಿನ್ನಾಭಿಪ್ರಾಯಗಳಿದ್ದರೆ ಮಾತನಾಡಿ ಪರಿಹರಿಸಿಕೊಳ್ಳುತ್ತೇವೆ


ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಜನ ನೊಂದಿದ್ದಾರೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಬದಲಾವಣೆ ನಿಶ್ಚಿತ. ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಘೋಷಣೆಯಾದ ಜಿ.ಕೃಷ್ಣಪ್ಪ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಯೊಂದಿಗೆ ಮಾತನಾಡಿದ ಅವರು, ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಹೈಕಮಾಂಡ್ ಈ ಅವಕಾಶ ನೀಡಿದೆ. ಟಿಕೆಟ್ ಘೋಷಣೆಯಾದ ಸಂದರ್ಭದಲ್ಲಿ ಆಕಾಂಕ್ಷಿಗಳಿಗೆ ಬೇಸರವಾಗುವುದು ಸಹಜ. ಇದನ್ನು ಸಮಾಧಾನಪಡಿಸಿ ಬಗೆಹರಿಸಲು ನಾಯಕರಿದ್ದಾರೆ. ಎಲ್ಲರೂ ಮಾತನಾಡಿ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳುತ್ತೇವೆ. ಒಗ್ಗಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ಅವರು ಹೇಳಿದರು.