ಅಜ್ಜಾವರ : ವಿಶ್ವ ಮಹಿಳಾ ದಿನಾಚರಣೆ

0

ಧನಲಕ್ಷ್ಮೀ ಮಹಿಳಾ ಮಂಡಲ ಅಜ್ಜಾವರ ಇದರ ವತಿಯಿಂದ ಶ್ರೀ ಶಂಕರ ಭಾರತಿ ವೇದಪಾಠ ಶಾಲೆಯಲ್ಲಿ ವಿಶ್ವ ಮಹಿಳಾ ದಿನಾಚರಣೆಯು ಮಾ.21ರಂದು ನಡೆಯಿತು. ಶ್ರೀಮತಿ ನಳಿನಾಕ್ಷಿ ಪ್ರಸಾದ್ ಅಡ್ಪಂಗಾಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶ್ರೀ ಮಹಿಷಮರ್ದಿನೀ ದೇವಸ್ಥಾನದ ಧರ್ಮದರ್ಶಿ ಭಾಸ್ಕರ್ ರಾವ್ ಬಯಂಬು ಕಾರ್ಯಕ್ರಮ ಉದ್ಘಾಟಸಿದರು. ಮುಖ್ಯ ಅತಿಥಿಯಾಗಿ ಧನಲಕ್ಷ್ಮೀ ಮಹಿಳಾ ಮಂಡಲದ ಸದಸ್ಯೆ ಶ್ರೀಮತಿ ವಿಮಲಾರುಣ ಪಡಂಬೈಲ್ ವಿಶ್ವ ಮಹಿಳಾ ದಿನಾಚರಣೆಯ ಕುರಿತು ವಿಶೇಷ ಭಾಷಣ ಮಾಡಿದರು. ವೇದಿಕೆಯಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ಮನೋರಮ ಪಡಂಬೈಲ್ , ಗೌರವಾಧ್ಯಕ್ಷೆ ಶ್ರೀಮತಿ ಶಶ್ಮಿ ಭಟ್, ಸ್ಥಾಪಕಾಧ್ಯಕ್ಷೆ ಶ್ರೀಮತಿ ಜಯಂತಿ ಜನಾರ್ಧನ, ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮೇಲ್ವಿಚಾರಕರಾದ ಶ್ರೀಮತಿ ವಿಶಾಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶ್ರೀಮತಿ ರಮ್ಯಾ ಶೀರ್ವಾಜೆ ಪ್ರಾರ್ಥಸಿ, ಶ್ರೀಮತಿ ಕವಿತಾ ಪುರುಷೋತ್ತಮ್ ಸ್ವಾಗತಿಸಿದರು. ಕೋಶಧಿಕಾರಿ ಶ್ರೀಮತಿ ವೇದಾವತಿ ಬಾಲಚಂದ್ರ ಅಡ್ಪಂಗಾಯ ವಂದಿಸಿದರು. ಕಾರ್ಯದರ್ಶಿ ಶ್ರೀಮತಿ ವಿಶಾಲ ಸೀತಾರಾಮ ಕಾರ್ಲಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here