
ಮರ್ಕಂಜ ಗ್ರಾಮದ ಶೆಟ್ಟಿಮಜಲು ಎಂಬಲ್ಲಿ ರೂ.1.4೦ ಕೋಟಿ ಅನುದಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಸೇತುವೆ ಹಾಗೂ ಕಿಂಡಿಅಣೆಕಟ್ಟನ್ನು ಸಚಿವರಾದ ಎಸ್. ಅಂಗಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮರ್ಕಂಜ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಪವಿತ್ರ ಗುಂಡಿ, ಉಪಾಧ್ಯಕ್ಷ ಗೋವಿಂದ ಅಳವುಪಾರೆ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಮಡಪ್ಪಾಡಿ ಗ್ರಾ.ಪಂ. ಸದಸ್ಯ ಜಯರಾಮ ಹಾಡಿಕಲ್ಲು ಹಾಗೂ ಊರಿನ ಪ್ರಮುಖರು, ಫಲಾನುಭವಿಗಳು ಉಪಸ್ಥಿತರಿದ್ದರು.