ರಂಜಿನಿ ಬಿ.ಯವರಿಗೆ ರಾಷ್ಟ್ರಮಟ್ಟದಲ್ಲಿ ಕಂಚಿನ ಪದಕ

0

ಇತ್ತೀಚಿಗೆ ಪುಣೆಯಲ್ಲಿ ನಡೆದ ರಾಷ್ಟ್ರಮಟ್ಟದ 21ನೇ ರಾಶಿಯ ಪ್ಯಾರಾ ಅಥ್ಲೆಟಿಕ್ ಚಾಂಪಿಯನ್ಶಿಪ್ ನ ಜಾವಲಿನ್ ಎಸೆತದಲ್ಲಿ ಕಂಚಿನ ಪದಕ ಪಡೆದು ದಕ್ಷಿಣ ಕನ್ನಡ ಜಿಲ್ಲೆಯಿಂದ ರಂಜಿನಿ ಬಿ. ಅವರು ಆಯ್ಕೆಯಾಗಿದ್ದಾರೆ.
ಇವರು ನಾಲ್ಕನೇ ಬಾರಿ ರಾಷ್ಟ್ರಮಟ್ಟವನ್ನು ಪ್ರತಿನಿಧಿಸಿದ್ದಾರೆ. ಎಣ್ಮೂರು ಪ್ರೌಢಶಾಲಾ ದೈಹಿಕ ಶಿಕ್ಷಕ ರಾಮಚಂದ್ರ ಮಾಸ್ಟರ್ ತರಬೇತಿ ನೀಡಿದ್ದಾರೆ. ಪ್ರಸ್ತುತ ಇವರು ಮುರುಳ್ಯ ಗ್ರಾಮ ಪಂಚಾಯತ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಎಡಮಂಗಲ ಗ್ರಾಮದ ಶಾಂತಿಯಡ್ಕ ಜನಾರ್ಧನ ಮತ್ತು ಜಯಂತಿ ದಂಪತಿಗಳ ಪುತ್ರಿ.