ನಂದಕುಮಾರ್‌ರಿಗೆ ಟಿಕೆಟ್ ನಿರಾಕರಣೆ ಹಿನ್ನಲೆ : ಹರಿಹರಪಲ್ಲತ್ತಡ್ ಗ್ರಾಮ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ರಾಜೀನಾಮೆ

0

ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಯಾಗಿದ್ದ ನಂದಕುಮಾರ್‌ರಿಗೆ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬೇಸತ್ತು ಹರಿಹರ ಪಲ್ಲತಡ್ಕ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ ಉಜ್ವಲ್ ಕಜ್ಜೋಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿದು ಬಂದಿದೆ.
ರಾಜೀನಾಮೆ ಪತ್ರವನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ರವರಿಗೆ ನೀಡಿದ್ದಾರೆ.
ರಾಜೀನಾಮೆ ಪತ್ರದಲ್ಲಿ ಕಳೆದ ೩೦ ವರ್ಷಗಳಿಂದ ಸುಳ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಾರದೆ ಈ ಬಾರಿ ನಂದಕುಮಾರ್ ರವರಿಗೆ ಅಭ್ಯರ್ಥಿ ಸ್ಥಾನವನ್ನು ನೀಡಿದ್ದಲ್ಲಿ ಕಾಂಗ್ರೆಸ್ ಪಕ್ಷದ ಒಬ್ಬ ಶಾಸಕರನ್ನು ಪಡೆಯುವ ಅವಕಾಶವಿತ್ತು. ಆದರೆ ನಂದಕುಮಾರ್ ಅವರಿಗೆ ಸೀಟು ಕೊಡುತ್ತೇವೆ ಎಂದು ಹೇಳಿ ಈಗ ಅಭ್ಯರ್ಥಿಯ ಹೆಸರನ್ನು ಬದಲಾಯಿಸಿರುವುದು ಸರಿಯಾದ ರೀತಿಯಲ್ಲಿ. ಇದೀಗ ಹೈಕಮಾಂಡ್ ಏಕಾಏಕಿ ಜಿ ಕೃಷ್ಣಪ್ಪರವರ ಹೆಸರನ್ನು ಸೂಚಿಸಿ ಕಾರ್ಯಕರ್ತರಿಗೆ ತುಂಬಾ ನೋವುಂಟು ಮಾಡಿದ್ದಾರೆ. ಆದ್ದರಿಂದ ನಂದಕುಮಾರ್ ಅವರಿಗೆ ಬಿ ಫಾರಂ ನೀಡದೆ ಇದ್ದಲ್ಲಿ ಮೇಲ್ಕಾಣಿಸಿದ ನಾನು ಪಕ್ಷದ ಎಲ್ಲಾ ಚಟುವಟಿಕೆಗಳಿಂದ ದೂರ ಇರುವುದಾಗಿ ಮತ್ತು ಈ ಮನವಿಯನ್ನು ಸ್ವೀಕರಿಸಬೇಕಾಗಿ ವಿನಂತಿಸಿಕೊಳ್ಳುತ್ತೇನೆ ಎಂದು ಪತ್ರವನ್ನು ಬರೆದಿದ್ದಾರೆ.