ಎ.10,11 : ಅಮೈ – ಕೊಡಿಯಾಲಬೈಲು ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ

0

ಉಬರಡ್ಕ ಮಿತ್ತೂರು ಗ್ರಾಮದ ಅಮೈ – ಕೊಡಿಯಾಲಬೈಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಕಾಲಂಪ್ರತಿ ನಡೆಯುವ ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲವು ಎ.10 ಮತ್ತು ಎ.11 ರಂದು ನಡೆಯಲಿದೆ.
ಎ.03 ರಂದು ಬೆಳಿಗ್ಗೆ ಗಂಟೆ 7.00 ಕ್ಕೆ ಗೊನೆ ಕಡಿಯಲಾಗುವುದು.


ಎ.06 ಕ್ಕೆ ಬೆಳಿಗ್ಗೆ ಗಂಟೆ 9.30 ಕ್ಕೆ ಪ್ರತಿಷ್ಠಾ ವಾರ್ಷಿಕೋತ್ಸವದ ತಂಬಿಲ ಸೇವೆ ನಡೆಯಲಿದೆ. ಎ.10 ರಂದು ಬೆಳಿಗ್ಗೆ ಗಂಟೆ 7.00 ಕ್ಕೆ ಗಣಪತಿ ಹವನ,ಸಂಜೆ ಗಂಟೆ 4.00 ಕ್ಕೆ ಊರವರ ಕೂಡುವಿಕೆ, ರಾತ್ರಿ ಗಂಟೆ 7.00 ಕ್ಕೆ ಶ್ರೀ ವಿಷ್ಣುಮೂರ್ತಿ ದೈವದ ಭಂಡಾರ ತೆಗೆಯುವುದು. 7.30 ಕ್ಕೆ ಮೇಲೇರಿಗೆ ಅಗ್ನಿಸ್ಪರ್ಶ ರಾತ್ರಿ ಗಂಟೆ 9.30 ಕ್ಕೆ ಕುಲ್ಚಾಟ ನಡೆಯಲಿದೆ.


ಎ.11 ರಂದು ಪ್ರಾತ:ಕಾಲ ಗಂಟೆ 5.30 ಕ್ಕೆ ಶ್ರೀ ವಿಷ್ಣುಮೂರ್ತಿ ದೈವದ ಅಗ್ನಿಪ್ರವೇಶ ಬೆಳಿಗ್ಗೆ ಗಂಟೆ 7.00 ರಿಂದ ಪ್ರಸಾದ ವಿತರಣೆ ನಡೆಯಲಿದೆ.