ಎ.23.ಮತ್ತು ಎ.24: ಪಂಜದ ಅಳ್ಪೆ ಚಿಂಗಾಣಿಗುಡ್ಡೆ ದೈವಸ್ಥಾನದಲ್ಲಿ ವಾರ್ಷಿಕ ತಂಬಿಲ ನೇಮೋತ್ಸವ -ಆಮಂತ್ರಣ ಪತ್ರಿಕೆ ಬಿಡುಗಡೆ

0

ಪಂಜದ ಅಳ್ಪೆ ಚಿಂಗಾಣಿಗುಡ್ಡೆ ಶ್ರೀ ಉಳ್ಳಾಕುಲು ಉಳ್ಳಾಲ್ತಿ,ಮಹಿಷಂತಾಯ ಹಾಗೂ ಪರಿವಾರ ದೈವಗಳ ದೈವಸ್ಥಾನ ಇದರ ವಾರ್ಷಿಕ ತಂಬಿಲ ಮತ್ತು ನೇಮೋತ್ಸವ ಎ.23 ಮತ್ತು ಎ24 ರಂದು ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಎ.6 ಜರುಗಿತು.


ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತಾಧಿಕಾರಿ ಡಾ.ದೇವಿಪ್ರಸಾದ್ ಕಾನತ್ತೂರ್ ದೈವಸ್ಥಾನದಲ್ಲಿ ಪ್ರಾರ್ಥಿಸಿ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು.
ದೈವಸ್ಥಾನದ ಆಡಳಿತ ಮಂಡಳಿ ಗೌರವಾಧ್ಯಕ್ಷ ಜತ್ತಪ್ಪ ಗೌಡ ಕೋಡಿ,ಅಧ್ಯಕ್ಷ ಭರತ್ ರಾಮತೋಟ, ಕಾರ್ಯದರ್ಶಿ ಕುಸುಮಾಧರ ಕರಿಮಜಲು,ಕೋಶಾಧಿಕಾರಿ ರಮೇಶ್ ಪಾಲೋಳಿ,ಉತ್ಸವ ಸಮಿತಿಯ ಅಧ್ಯಕ್ಷ ಪ್ರಶಾಂತ್ ಅಳ್ಪೆ, ಕೋಶಾಧಿಕಾರಿ ಶರತ್ ಕೋಡಿ, ಆಡಳಿತ ಮಂಡಳಿ ಪದಾಧಿಕಾರಿಗಳು, ಉತ್ಸವ ಸಮಿತಿಯ ಪದಾಧಿಕಾರಿಗಳು,ಸರ್ವ ಸದಸ್ಯರು ಉಪಸ್ಥಿತರಿದ್ದರು.ಗುರುಪ್ರಸಾದ್ ತೋಟ ವಂದಿಸಿದರು.