ಬೆಳ್ಳಾರೆ: ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ

0

ಬೆಳ್ಳಾರೆಯ ಅಜಪಿಲ‌ ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲವು ಏ. 7-8 ರಂದು ನಡೆಯಿತು.


ಏ. 7ರಂದು ಸಂಜೆ ಭಂಡಾರ ತೆಗೆದು ಬಳಿಕ ಮೇಲೇರಿಗೆ ಅಗ್ನಿಸ್ಪರ್ಶದ ಬಳಿಕ. ಧಾರ್ಮಿಕ ದಭಾ ಕಾರ್ಯಕ್ರಮ ನಡೆಯಿತು. ನಂತರ ಅನ್ನ ಸಂತರ್ಪಣೆ ನಡೆದು ಶ್ರೀ ಮಹಾವಿಷ್ಣುಮೂರ್ತಿ ದೈವದ ಕುಳಿಚಟ್ಟು ನಡೆಯಿತು. ಬಳಿಕ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ಬಯಲಾಟ ಜಾಂಬವತಿ ಕಲ್ಯಾಣ ನಡೆಯಿತು.

ಏ. 8 ರಂದು ಪ್ರಾತಃಕಾಲ ಶ್ರೀ ವಿಷ್ಣುಮೂರ್ತಿ ದೈವದ ಅಗ್ನಿ ಪ್ರವೇಶ, ಶ್ರೀ ಮಹಾಲಿಂಗೇಶ್ವರ ದೇವರ ಭೇಟಿ ನಂತರ ಮಾರಿಕಳ ನಡೆಯಿತು. ಬಳಿಕ ಪ್ರಸಾದ ವಿತರಣೆ ನಡೆದು, ಮುಳ್ಳು ಗುಳಿಗ ದೈವದ ಕೋಲ ನಡೆಯಲಿದೆ.